Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...