Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...