Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....