Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...