Homeಮುಖಪುಟಬಾಲ್ಯ ವಿವಾಹ ತಡೆಯಲು ಶೀಘ್ರದಲ್ಲೇ 2,000ಕ್ಕೂ ಹೆಚ್ಚು ಜನರ ಬಂಧನ: ಹಿಮಂತ್ ಬಿಸ್ವಾ ಶರ್ಮಾ

ಬಾಲ್ಯ ವಿವಾಹ ತಡೆಯಲು ಶೀಘ್ರದಲ್ಲೇ 2,000ಕ್ಕೂ ಹೆಚ್ಚು ಜನರ ಬಂಧನ: ಹಿಮಂತ್ ಬಿಸ್ವಾ ಶರ್ಮಾ

- Advertisement -
- Advertisement -

”ಬಾಲ್ಯವಿವಾಹದ ವಿರುದ್ಧದ ಅಭಿಯಾನದ ಭಾಗವಾಗಿ ರಾಜ್ಯ ಪೊಲೀಸರು ಮುಂದಿನ ಹತ್ತು ದಿನಗಳಲ್ಲಿ 2,000 ರಿಂದ 3,000 ಪುರುಷರನ್ನು ಬಂಧಿಸಲಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

ಅಸ್ಸಾಂನ ಸರ್ಕಾರವು ಫೆಬ್ರವರಿಯಿಂದ ರಾಜ್ಯವ್ಯಾಪಿ ಬಾಲ್ಯ ವಿವಾಹಗಳ ವಿರುದ್ಧ ಶಿಸ್ತುಕ್ರಮವನ್ನು ಕೈಗೊಂಡಿದೆ. 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾದವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಬಿಜೆಪಿ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶರ್ಮಾ ಅವರು ಬಾಲ್ಯ ವಿವಾಹದ ವಿರುದ್ಧದ ಅಭಿಯಾನದ ಕುರಿತು ಮಾತನಾಡಿದ್ದು, ”ಆರು ತಿಂಗಳ ಹಿಂದೆ, ನಾನು ಅಸ್ಸಾಂನಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ 5,000 ಜನರನ್ನು ಬಂಧಿಸಿದ್ದೆ” ಎಂದು ಹೇಳಿದರು.

”ನಾನು ಜಿ 20 ಕೊನೆಗೊಳ್ಳಲು ಕಾಯುತ್ತಿದ್ದೆ. ಇನ್ನು 10 ದಿನಗಳಲ್ಲಿ 2,000-3,000 ಪುರುಷರನ್ನು ಬಾಲ್ಯವಿವಾಹ ಪ್ರಕರಣದಲ್ಲಿ ಬಂಧಿಸುತ್ತೇನೆ. ಏಕೆಂದರೆ ನಾವು ಬಾಲ್ಯ ವಿವಾಹವನ್ನು ನಿರ್ಮೂಲನೆ ಮಾಡಬೇಕು ಎಂದು ಕಾನೂನು ರೂಪಿಸಲಾಗಿದೆ. ಆದರೂ ಅಂತಹ ಪ್ರಕರಣಗಳು ನಡೆದರೆ ಆ ಹೆಣ್ಣುಮಕ್ಕಳು ಎಂದಿಗೂ ಪ್ರಗತಿ ಹೊಂದುವುದಿಲ್ಲ, ಅವರು ಶೋಷಣೆಗೆ ಬಲಿಯಾಗುತ್ತಲೇ ಇರುತ್ತಾರೆ” ಎಂದು ಎಚ್ಚರಿಸಿದರು.

”ನಾವು ಮುಸ್ಲಿಂ ವಿರೋಧಿ ಎಂದು ಕೆಲವರು ಹೇಳುತ್ತಾರೆ. ಆದರೆ ತ್ರಿವಳಿ ತಲಾಖ್, ಬಹುಪತ್ನಿತ್ವ ಮತ್ತು ಬಾಲ್ಯವಿವಾಹವನ್ನು ಕೊನೆಗೊಳಿಸುವ ಮೂಲಕ ಮುಸ್ಲಿಮರಿಗೆ ಒಳ್ಳೆಯದನ್ನೇ ಮಾಡಿದ್ದೇವೆ” ಎಂದು ಹೇಳಿದರು.

ಪೊಲೀಸರ ಮಾಹಿತಿ ಪ್ರಕಾರ ಬಂಧಿತರಲ್ಲಿ ಹೆಚ್ಚಿನವರು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಯವರು ಎಂದು ತೋರಿಸಿದೆ.

”ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಕಾನೂನನ್ನು ತರಲಿದೆ” ಎಂದು ಜುಲೈನಲ್ಲಿ ಶರ್ಮಾ ಹೇಳಿದ್ದರು.

ಬಹುಪತ್ನಿತ್ವ – ಒಂದಕ್ಕಿಂತ ಹೆಚ್ಚು ಹೆಂಡತಿಯರನ್ನು ಹೊಂದುವ ಅಭ್ಯಾಸ – ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಅನುಮತಿಸಲಾಗಿದೆ. 1950ರ ದಶಕದಲ್ಲಿ ಹಿಂದೂ ಕೋಡ್ ಬಿಲ್ ಮೂಲಕ ಹಿಂದೂಗಳಲ್ಲಿ ಈ ಆಚರಣೆಯನ್ನು ನಿಷೇಧಿಸಲಾಯಿತು, ಅದು ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ಅಂಶಗಳನ್ನು ನಿಯಂತ್ರಿಸುತ್ತದೆ.

ಇದನ್ನೂ ಓದಿ: ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...