Homeಕರ್ನಾಟಕಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ...

ಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ

- Advertisement -
- Advertisement -

ಬೆಂಗಳೂರು: ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ‌.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

8 ವರ್ಷಗಳಿಂದಲೂ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಉಮಾದೇವ, ಟಿ.ಎಸ್.ರಮಾ ಮುಂತಾದವರು ಹಾಜರಿದ್ದರು.

ಆಶಾ ಕಾರ್ಯಕರ್ತ ಬೇಡಿಕೆಗಳೇನು?

– ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ಗೌರವಧನವನ್ನು ಮಾಸಿಕ ರೂ.20 ಸಾವಿರಕ್ಕೆ ಹೆಚ್ಚಿಸಬೇಕು.

– 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

– ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು.

– ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು.

– ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಆರೋಗ್ಯ ಇಲಾಖೆ ಹೇಳುವುದೇನು?

– ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.

-ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.

– ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ.

– 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯ ಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ.

– ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

– ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ.

– ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.

– ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ.

– ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...