Homeಮುಖಪುಟಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

- Advertisement -
- Advertisement -

‘ದಿ ಲ್ಯಾನ್ಸೆಟ್ ಜರ್ನಲ್‌’ನಲ್ಲಿ ಪ್ರಕಟವಾದ ವಿಶ್ಲೇಷಣೆಯ ಪ್ರಕಾರ, 2023 ರಲ್ಲಿ ಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಹುಡುಗಿಯರು ಮತ್ತು ಶೇ.13 ಹುಡುಗರು ಲೈಂಗಿಕ ದೌರ್ಜನ್ಯವನ್ನು ಅನುಭವಿಸಿದ್ದಾರೆ ಎಂದು ವರದಿ ಹೇಳಿದೆ.

1990 ಮತ್ತು 2023 ರ ನಡುವೆ 200 ಕ್ಕೂ ಹೆಚ್ಚು ದೇಶಗಳಲ್ಲಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಂದಾಜಿಸಿದಾಗ, ದಕ್ಷಿಣ ಏಷ್ಯಾದಲ್ಲಿ ಹುಡುಗಿಯರಿಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅಧ್ಯಯನವು ಕಂಡುಹಿಡಿದಿದೆ. ಬಾಂಗ್ಲಾದೇಶದಲ್ಲಿ 9.3% ರಿಂದ ಭಾರತದಲ್ಲಿ 30.8% ವರೆಗೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ.

ಪ್ರಪಂಚದಾದ್ಯಂತ, ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು 18 ವರ್ಷ ತುಂಬುವ ಮೊದಲು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ಅಂದಾಜಿಸಲಾಗಿದೆ.

ಯುಎಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದ ಆರೋಗ್ಯ ಮಾಪನ ಮತ್ತು ಮೌಲ್ಯಮಾಪನ ಸಂಸ್ಥೆಯ ಸಂಶೋಧಕರು ಸೇರಿದಂತೆ, ಉಪ-ಸಹಾರನ್ ಆಫ್ರಿಕಾವು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರಲ್ಲಿ ಅತಿ ಹೆಚ್ಚು ಲೈಂಗಿಕ ದೌರ್ಜನ್ಯದ ಪ್ರಮಾಣವನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದು ಜಿಂಬಾಬ್ವೆಯಲ್ಲಿ ಸುಮಾರು ಎಂಟು ಪ್ರತಿಶತದಿಂದ ಕೋಟ್ ಡಿ’ಐವೋರ್‌ನಲ್ಲಿ 28 ಪ್ರತಿಶತದವರೆಗೆ ಬದಲಾಗುತ್ತದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಸಾರ್ವಜನಿಕ ಆರೋಗ್ಯ ಮತ್ತು ಮಾನವ ಹಕ್ಕುಗಳ ನಿರ್ಣಾಯಕ ಸಮಸ್ಯೆಯಾಗಿದೆ. ಲೈಂಗಿಕ ದೌರ್ಜನ್ಯದ ಪರಿಣಾಮಗಳು ಮಾನಸಿಕ ಆರೋಗ್ಯ ಸ್ಥಿತಿಗಳ ಅಪಾಯವನ್ನು ಹೆಚ್ಚಿಸುವ ಮೂಲಕ ಸಂತ್ರಸ್ತರ ದೀರ್ಘಕಾಲೀನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ.

ಲೈಂಗಿಕ ದೌರ್ಜನ್ಯದ ನಿಖರವಾದ ಜಾಗತಿಕ ಅಂದಾಜುಗಳು ಉದ್ದೇಶಿತ ತಡೆಗಟ್ಟುವಿಕೆ, ವಕಾಲತ್ತು ಪ್ರಯತ್ನಗಳಿಗೆ ಮುಖ್ಯವೆಂದು ಸಂಶೋಧಕರು ಹೇಳಿದ್ದಾರೆ.

ಆದರೂ, ಅಸ್ತಿತ್ವದಲ್ಲಿರುವ ಅಧ್ಯಯನಗಳು ಸೀಮಿತ ಸಂಖ್ಯೆಯ ದೇಶಗಳ ಅಂದಾಜುಗಳನ್ನು ಪ್ರಸ್ತುತಪಡಿಸುತ್ತವೆ. ದತ್ತಾಂಶ ವಿರಳತೆ ಮತ್ತು ಮಾಪನ ಸವಾಲುಗಳಿಂದ ಅಡ್ಡಿಯಾಗುತ್ತವೆ ಎಂದು ಅವರು ಹೇಳಿದರು.

ಜಾಗತಿಕ ಅಂದಾಜುಗಳನ್ನು ಒದಗಿಸಿದ ಮೊದಲ ಅಧ್ಯಯನಗಳಲ್ಲಿ ಒಂದಾದ ಈ ಅಧ್ಯಯನವು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಹರಡುವಿಕೆಯ ಕುರಿತು ಸಾರ್ವಜನಿಕವಾಗಿ ಲಭ್ಯವಿರುವ ಭಂಡಾರಗಳನ್ನು ಪರಿಶೀಲಿಸಿದೆ.

“2023 ರಲ್ಲಿ ಜಾಗತಿಕವಾಗಿ ವಯಸ್ಸಿನ-ಪ್ರಮಾಣೀಕೃತ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ) ಹರಡುವಿಕೆಯು ಮಹಿಳೆಯರಿಗೆ ಶೇ. 18.9 ಮತ್ತು ಪುರುಷರಿಗೆ ಶೇ. 14.8 ಎಂದು ನಾವು ಅಂದಾಜಿಸಿದ್ದೇವೆ” ಎಂದು ಸಂಶೋಧಕರು ಬರೆದಿದ್ದಾರೆ.

18 ವರ್ಷಕ್ಕಿಂತ ಮೊದಲು ಹದಿಹರೆಯದವರು ಮತ್ತು ಯುವ ವಯಸ್ಕರಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಮೊದಲ ಬಾರಿಗೆ ಒಡ್ಡಿಕೊಳ್ಳುವುದು ವಿಶ್ವದ ಸುಮಾರು ಶೇ. 70 ರಷ್ಟು ಪುರುಷರು ಹಾಗೂ ಮಹಿಳೆಯರಲ್ಲಿ ಕಂಡುಬಂದಿದೆ ಎಂದು ತಂಡ ಹೇಳಿದೆ.

‘ನಿರಂತರ ದತ್ತಾಂಶ ಅಂತರ’ವನ್ನು ಸಹ ಸಂಶೋಧಕರು ಕಂಡುಕೊಂಡರು, ಇದಕ್ಕಾಗಿ ಅವರು ವಿಸ್ತೃತ ಸಮೀಕ್ಷೆಗಳು ಮತ್ತು ಕಣ್ಗಾವಲು ಕಾರ್ಯಕ್ರಮಗಳ ಮೇಲೆ ಒತ್ತು ನೀಡಿದರು.

ಲೈಂಗಿಕ ದೌರ್ಜನ್ಯದಿಂದ ಚೇತರಿಸಿಕೊಂಡವರನ್ನು ಅವರ ಜೀವನದುದ್ದಕ್ಕೂ ಬೆಂಬಲಿಸಲು, ಲೈಂಗಿಕ ಹಿಂಸೆಯಿಂದ ಮುಕ್ತವಾದ ಬಾಲ್ಯವನ್ನು ಸೃಷ್ಟಿಸಲು ಹೆಚ್ಚಿನ ಸೇವೆಗಳು ಮತ್ತು ವ್ಯವಸ್ಥೆಗಳನ್ನು ಸ್ಥಾಪಿಸಬೇಕೆಂದು ಅವರು ಲೇಖಕರು ಕರೆ ನೀಡಿದರು.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...