Homeಕರ್ನಾಟಕ300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ನಗರಸಭೆ ವ್ಯಾಪ್ತಿಯ ಇಂದಿರಾಗಾಂಧಿ ಬಡಾವಣೆಯಲ್ಲಿ ವಾಸವಿದ್ದ ಸುಮಾರು 300 ರಷ್ಟು ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ನಗರದ ಅಝಾದ್‌ ವೃತ್ತದ ಬಳಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲೆಯ ಉಪ್ಪಳ್ಳಿ ಸಮೀಪದ ಕಲ್ದೊಡ್ಡಿಯ ಇಂದಿರಾಗಾಂಧಿ ಬಡಾವಣೆಯಲ್ಲಿ ಸುಮಾರು 300 ಕ್ಕಿಂತಲೂ ಹೆಚ್ಚಿನ ಕುಟುಂಬಗಳು ಹಲವಾರು ವರ್ಷಗಳಿಂದ ವಾಸವಿತ್ತು. ಈ ಗುಡಿಸಲುಗಳನ್ನು ಒಂದೂವರೆ ವರ್ಷಗಳ ಹಿಂದೆ ನಗರ ಸಭೆಯು ಏಕಾಏಕಿ ಧ್ವಂಸ ಮಾಡಿತ್ತು.

ಇದರ ನಂತರ ಇಲ್ಲಿನ ನಿವಾಸಿಗಳು ತಾಲೂಕು ಆಫಿಸೀನ ಬಳಿ ಉಪವಾಸ ಸತ್ಯಾಗ್ರಹ ಮಾಡಿದ್ದರು. ಈ ಹೋರಾಟಕ್ಕೆ ಮಣಿದ ಜಿಲ್ಲಾಧಿಕಾರಿ ಮತ್ತು ನಗರಸಭೆಯ ಅಯುಕ್ತರು 15-20 ದಿನಗಳಲ್ಲಿ ನಿವೇಶನಗಳನ್ನು ಮತ್ತು ಹಕ್ಕು ಪತ್ರಗಳನ್ನು ನೀಡುವುದಾಗಿ ಭರವಸೆ ನೀಡಿ ಮುಷ್ಕರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು. ಆದರೆ ಈ ಭರವಸೆಗಳು ಭರವಸೆಗಳಾಗಿಯೇ ಉಳಿದಿವೆ ಎಂದು ಅಲ್ಲಿನ ನಿವಾಸಿಗಳು ದೂರಿದ್ದಾರೆ.

ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ

ಇಂದು ನಗರದ ಆಝಾದ್ ವೃತ್ತದ ಬಳಿ ಸೇರಿದ ಸಂತ್ರಸ್ತ ಜನರು, ತಾವು ವಾಸವಿದ್ದ ಗುಡಿಸಲು ಧ್ವಂಸಮಾಡಿ ತಮ್ಮನ್ನು ಬೀದಿಪಾಲು ಮಾಡಿದ ನಗರಸಭೆಯ ನಡೆಯನ್ನು ಖಂಡಿಸಿ, ಎಲ್ಲರಿಗೂ ಕೂಡಲೇ ನಿವೇಶನ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಯೊಂದು ಸಂತ್ರಸ್ತ ಕುಟುಂಬಗಳು ತಮಗೆ ನಿವೇಶನದ ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ನೀಡಿದರು. ಪ್ರತಿಭಟನಾಕಾರರ ಮನವಿಗಳನ್ನು ನಗರಸಭೆಯ ಆಯುಕ್ತರು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಗೌಸ್‌ ಮೊಹಿಯುದ್ದೀನ್, ಸಂವಿಧಾನ ಸಂರಕ್ಷಣ ಸಮಿತಿಯ ಕೃಷ್ಣಮೂರ್ತಿ, ವಿಶ್ವರತ್ನ ಯುವ ಸೇನೆಯ ಅಧ್ಯಕ್ಷರಾದ ವೆಂಕಟೇಶ್, ಕರ್ನಾಟಕ ಜನಶಕ್ತಿಯ ಕೆ.ಎಲ್ . ಅಶೋಕ್, ಜಾತ್ಯಾತೀತ ಜನತಾದಳ ಪಕ್ಷದ ಹೆಚ್‌.ಎಸ್. ದೇವರಾಜ್, ಡಿಎಸ್‌ಎಸ್‌ ಚಂದ್ರಶೇಖರ್‌, ನುಡಿಕನ್ನಡ ಪುಸ್ತಕ ಮನೆಯ ನೀಳಗುಳಿ ಪದ್ಮನಾಭ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ತಮ್ಮ ಗುಡಿಸಲುಗಳನ್ನು ನಾಶ ಮಾಡಿದ ಸರ್ಕಾರದ ವಿರುದ್ದ ಸಂತ್ರಸ್ಥೆಯೊಬ್ಬರ ಆಕ್ರೋಶ ವಿಡಿಯೋ ನೋಡಿ

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...