Homeಅಂತರಾಷ್ಟ್ರೀಯನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

- Advertisement -
- Advertisement -

ಇಂದು ಅಂತರಾಷ್ಟ್ರೀಯ ಯೋಗದಿನ. ಭಾರತದ ಮೂಲೆ ಮೂಲೆಯಲ್ಲದೇ ಜಗತ್ತಿನ ವಿವಿಧ ದೇಶಗಳಲ್ಲೂ ಯೋಗದಿನವನ್ನು ಆಚರಿಸಲಾಗುತ್ತಿದೆ. ಜಾತಿ, ಮತ, ಭಾಷೆ, ಧರ್ಮಗಳ ಎಲ್ಲೆಗಳನ್ನು ಮೀರಿ ಯೋಗ ಜಗತ್ತನ್ನು ಬೆಸೆಯುತ್ತಿದ್ದು ದೈಹಿಕ ಮತ್ತು ಮಾನಸಿಕ ಆರೊಗ್ಯದ ಜಾಗೃತಿಗೆ ಯೋಗದ ಮೂಲಕ ಕರೆಕೊಡಲಾಗುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌ ನಗರದ ಪ್ರಸಿದ್ಧ ಟೈಮ್‌ ಸ್ಕ್ವೈರ್‌ನಲ್ಲಿ ಸುಮಾರು 3,000 ಜನರು ಯೋಗವನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗದಿನದ ಆಚರಿಸಿದ್ದಾರೆ.

ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯು ನ್ಯೂಯಾರ್ಕ್ ಟೈಮ್‌ ಸ್ಕ್ವೈರ್ ಅಲೈನ್ಸ್ ಜೊತೆ ಸೆರಿ ಈ ಸಾಮೂಹಿಕ ಯೋಗದಿನದ ಆಚರಣೆಯನ್ನು ಆಯೋಜಿಸಿದೆ.

“ಯೋಗ ಭಾರತದಲ್ಲಿ ಹುಟ್ಟಿ ಇಂದು ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪಸರಿಸಿದೆ. ಸಾವಿರಾರು ಜನರು ಯೋಗದ ಕಲಿಕೆಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಇರುವಲ್ಲಿಯೇ ಯೊಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡುವ ನೈಸರ್ಗಿಕ ವಿಧಾನವಾದ ಯೋಗವನ್ನು ಜಗತ್ತಿನ ಎಲ್ಲರು ರೂಢಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಮೆರಿಕಾದ ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಯೋಗದಿನವನ್ನು ಆಯೊಜಿಸಲು ಹರ್ಷವಾಗುತ್ತಿದೆ. ಯೋಗ ಒಂದು ಜೀವನಶೈಲಿಯಾಗಿ ನಮ್ಮದಾಗಬೇಕು. ಇಂದು ಬಹುಮುಖ್ಯವಾಗಿ ಯೋಗದ ಮೂಲ ಸ್ವರೂಪವನ್ನು ಉಳಿಸಿಕೊಂಡು ಅತ್ಯಂತ ಸಹಜವಾಗಿ ಯೋಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ಸಮಾಜದ ಸ್ವಾಸ್ಥ್ಯ ಮತ್ತು ಹಸಿರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯೊಗವನ್ನು ಉಳಿಸಬೇಕು ಮತ್ತು ಬೆಳೆಸಬೇಕು” ಎಂದು ಭಾರತದ ಮುಖ್ಯ ರಾಯಭಾರಿ ರಂಧೀರ್ ಜೈಸ್ವಾಲ್ ತಿಳಿಸಿದ್ದಾರೆ.

“ಯೋಗ ಪ್ರಾಣಾಯಾಮ ಮತ್ತು ಆಯುರ್ವೇದದ ಮಹತ್ವವನ್ನು ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಸಾರಲು ಅತ್ಯಂತ ಸಂತೋಷವಾಗುತ್ತದೆ. ನಗರದ ಗದ್ದಲಗಳು ಎಂದಿಗೂ ನಿಲ್ಲುವುದಿಲ್ಲ. ನಡುವೆ ನಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ” ಎಂದು ಟೈಮ್‌ ಸ್ಕ್ವೈರ್‌ನ ಯೋಗ ದಿನದ ಅಚರಣೆಯಲ್ಲಿ ಭಾಗವಹಿಸಿದ್ದ ರುಚಿಕಾ ಲಾಲ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಸಂಸ್ಥೆಯು ಯೋಗಾ ಫಾರ್ ವೆಲ್‌ನೆಸ್‌ ಎಂಬ ಧ್ಯೇಯವಾಕ್ಯವನ್ನು ಈ ವರ್ಷದ ಯೋಗದಿನದ ಆಚರಣೆಯ ಸಂದರ್ಭದಲ್ಲಿ ನೀಡಿದ್ದು ಟೈಮ್‌ ಸ್ಕ್ವ್ಯಾರ್‌ನ ಕಾರ್ಯಕ್ರಮದಲ್ಲಿ ಭಾರತದ ಯೋಗ, ಪ್ರಣಾಯಾಮ, ಆಯುರ್ವೇದ ಮತ್ತು ಭಾರತದ ಬುಡಕಟ್ಟುಗಳಲ್ಲಿರುವ  ಗಿಡಮೂಲಿಕೆ ಔಷಧಗಳ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಕೂಡ ನಡೆದಿದೆ.


ಇದನ್ನೂ ಓದಿ : ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...