Homeಅಂತರಾಷ್ಟ್ರೀಯನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

- Advertisement -
- Advertisement -

ಇಂದು ಅಂತರಾಷ್ಟ್ರೀಯ ಯೋಗದಿನ. ಭಾರತದ ಮೂಲೆ ಮೂಲೆಯಲ್ಲದೇ ಜಗತ್ತಿನ ವಿವಿಧ ದೇಶಗಳಲ್ಲೂ ಯೋಗದಿನವನ್ನು ಆಚರಿಸಲಾಗುತ್ತಿದೆ. ಜಾತಿ, ಮತ, ಭಾಷೆ, ಧರ್ಮಗಳ ಎಲ್ಲೆಗಳನ್ನು ಮೀರಿ ಯೋಗ ಜಗತ್ತನ್ನು ಬೆಸೆಯುತ್ತಿದ್ದು ದೈಹಿಕ ಮತ್ತು ಮಾನಸಿಕ ಆರೊಗ್ಯದ ಜಾಗೃತಿಗೆ ಯೋಗದ ಮೂಲಕ ಕರೆಕೊಡಲಾಗುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌ ನಗರದ ಪ್ರಸಿದ್ಧ ಟೈಮ್‌ ಸ್ಕ್ವೈರ್‌ನಲ್ಲಿ ಸುಮಾರು 3,000 ಜನರು ಯೋಗವನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗದಿನದ ಆಚರಿಸಿದ್ದಾರೆ.

ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯು ನ್ಯೂಯಾರ್ಕ್ ಟೈಮ್‌ ಸ್ಕ್ವೈರ್ ಅಲೈನ್ಸ್ ಜೊತೆ ಸೆರಿ ಈ ಸಾಮೂಹಿಕ ಯೋಗದಿನದ ಆಚರಣೆಯನ್ನು ಆಯೋಜಿಸಿದೆ.

“ಯೋಗ ಭಾರತದಲ್ಲಿ ಹುಟ್ಟಿ ಇಂದು ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪಸರಿಸಿದೆ. ಸಾವಿರಾರು ಜನರು ಯೋಗದ ಕಲಿಕೆಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಇರುವಲ್ಲಿಯೇ ಯೊಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡುವ ನೈಸರ್ಗಿಕ ವಿಧಾನವಾದ ಯೋಗವನ್ನು ಜಗತ್ತಿನ ಎಲ್ಲರು ರೂಢಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಮೆರಿಕಾದ ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಯೋಗದಿನವನ್ನು ಆಯೊಜಿಸಲು ಹರ್ಷವಾಗುತ್ತಿದೆ. ಯೋಗ ಒಂದು ಜೀವನಶೈಲಿಯಾಗಿ ನಮ್ಮದಾಗಬೇಕು. ಇಂದು ಬಹುಮುಖ್ಯವಾಗಿ ಯೋಗದ ಮೂಲ ಸ್ವರೂಪವನ್ನು ಉಳಿಸಿಕೊಂಡು ಅತ್ಯಂತ ಸಹಜವಾಗಿ ಯೋಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ಸಮಾಜದ ಸ್ವಾಸ್ಥ್ಯ ಮತ್ತು ಹಸಿರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯೊಗವನ್ನು ಉಳಿಸಬೇಕು ಮತ್ತು ಬೆಳೆಸಬೇಕು” ಎಂದು ಭಾರತದ ಮುಖ್ಯ ರಾಯಭಾರಿ ರಂಧೀರ್ ಜೈಸ್ವಾಲ್ ತಿಳಿಸಿದ್ದಾರೆ.

“ಯೋಗ ಪ್ರಾಣಾಯಾಮ ಮತ್ತು ಆಯುರ್ವೇದದ ಮಹತ್ವವನ್ನು ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಸಾರಲು ಅತ್ಯಂತ ಸಂತೋಷವಾಗುತ್ತದೆ. ನಗರದ ಗದ್ದಲಗಳು ಎಂದಿಗೂ ನಿಲ್ಲುವುದಿಲ್ಲ. ನಡುವೆ ನಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ” ಎಂದು ಟೈಮ್‌ ಸ್ಕ್ವೈರ್‌ನ ಯೋಗ ದಿನದ ಅಚರಣೆಯಲ್ಲಿ ಭಾಗವಹಿಸಿದ್ದ ರುಚಿಕಾ ಲಾಲ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಸಂಸ್ಥೆಯು ಯೋಗಾ ಫಾರ್ ವೆಲ್‌ನೆಸ್‌ ಎಂಬ ಧ್ಯೇಯವಾಕ್ಯವನ್ನು ಈ ವರ್ಷದ ಯೋಗದಿನದ ಆಚರಣೆಯ ಸಂದರ್ಭದಲ್ಲಿ ನೀಡಿದ್ದು ಟೈಮ್‌ ಸ್ಕ್ವ್ಯಾರ್‌ನ ಕಾರ್ಯಕ್ರಮದಲ್ಲಿ ಭಾರತದ ಯೋಗ, ಪ್ರಣಾಯಾಮ, ಆಯುರ್ವೇದ ಮತ್ತು ಭಾರತದ ಬುಡಕಟ್ಟುಗಳಲ್ಲಿರುವ  ಗಿಡಮೂಲಿಕೆ ಔಷಧಗಳ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಕೂಡ ನಡೆದಿದೆ.


ಇದನ್ನೂ ಓದಿ : ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...