Homeಅಂತರಾಷ್ಟ್ರೀಯನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

- Advertisement -
- Advertisement -

ಇಂದು ಅಂತರಾಷ್ಟ್ರೀಯ ಯೋಗದಿನ. ಭಾರತದ ಮೂಲೆ ಮೂಲೆಯಲ್ಲದೇ ಜಗತ್ತಿನ ವಿವಿಧ ದೇಶಗಳಲ್ಲೂ ಯೋಗದಿನವನ್ನು ಆಚರಿಸಲಾಗುತ್ತಿದೆ. ಜಾತಿ, ಮತ, ಭಾಷೆ, ಧರ್ಮಗಳ ಎಲ್ಲೆಗಳನ್ನು ಮೀರಿ ಯೋಗ ಜಗತ್ತನ್ನು ಬೆಸೆಯುತ್ತಿದ್ದು ದೈಹಿಕ ಮತ್ತು ಮಾನಸಿಕ ಆರೊಗ್ಯದ ಜಾಗೃತಿಗೆ ಯೋಗದ ಮೂಲಕ ಕರೆಕೊಡಲಾಗುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌ ನಗರದ ಪ್ರಸಿದ್ಧ ಟೈಮ್‌ ಸ್ಕ್ವೈರ್‌ನಲ್ಲಿ ಸುಮಾರು 3,000 ಜನರು ಯೋಗವನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗದಿನದ ಆಚರಿಸಿದ್ದಾರೆ.

ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯು ನ್ಯೂಯಾರ್ಕ್ ಟೈಮ್‌ ಸ್ಕ್ವೈರ್ ಅಲೈನ್ಸ್ ಜೊತೆ ಸೆರಿ ಈ ಸಾಮೂಹಿಕ ಯೋಗದಿನದ ಆಚರಣೆಯನ್ನು ಆಯೋಜಿಸಿದೆ.

“ಯೋಗ ಭಾರತದಲ್ಲಿ ಹುಟ್ಟಿ ಇಂದು ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪಸರಿಸಿದೆ. ಸಾವಿರಾರು ಜನರು ಯೋಗದ ಕಲಿಕೆಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಇರುವಲ್ಲಿಯೇ ಯೊಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡುವ ನೈಸರ್ಗಿಕ ವಿಧಾನವಾದ ಯೋಗವನ್ನು ಜಗತ್ತಿನ ಎಲ್ಲರು ರೂಢಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಮೆರಿಕಾದ ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಯೋಗದಿನವನ್ನು ಆಯೊಜಿಸಲು ಹರ್ಷವಾಗುತ್ತಿದೆ. ಯೋಗ ಒಂದು ಜೀವನಶೈಲಿಯಾಗಿ ನಮ್ಮದಾಗಬೇಕು. ಇಂದು ಬಹುಮುಖ್ಯವಾಗಿ ಯೋಗದ ಮೂಲ ಸ್ವರೂಪವನ್ನು ಉಳಿಸಿಕೊಂಡು ಅತ್ಯಂತ ಸಹಜವಾಗಿ ಯೋಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ಸಮಾಜದ ಸ್ವಾಸ್ಥ್ಯ ಮತ್ತು ಹಸಿರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯೊಗವನ್ನು ಉಳಿಸಬೇಕು ಮತ್ತು ಬೆಳೆಸಬೇಕು” ಎಂದು ಭಾರತದ ಮುಖ್ಯ ರಾಯಭಾರಿ ರಂಧೀರ್ ಜೈಸ್ವಾಲ್ ತಿಳಿಸಿದ್ದಾರೆ.

“ಯೋಗ ಪ್ರಾಣಾಯಾಮ ಮತ್ತು ಆಯುರ್ವೇದದ ಮಹತ್ವವನ್ನು ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಸಾರಲು ಅತ್ಯಂತ ಸಂತೋಷವಾಗುತ್ತದೆ. ನಗರದ ಗದ್ದಲಗಳು ಎಂದಿಗೂ ನಿಲ್ಲುವುದಿಲ್ಲ. ನಡುವೆ ನಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ” ಎಂದು ಟೈಮ್‌ ಸ್ಕ್ವೈರ್‌ನ ಯೋಗ ದಿನದ ಅಚರಣೆಯಲ್ಲಿ ಭಾಗವಹಿಸಿದ್ದ ರುಚಿಕಾ ಲಾಲ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಸಂಸ್ಥೆಯು ಯೋಗಾ ಫಾರ್ ವೆಲ್‌ನೆಸ್‌ ಎಂಬ ಧ್ಯೇಯವಾಕ್ಯವನ್ನು ಈ ವರ್ಷದ ಯೋಗದಿನದ ಆಚರಣೆಯ ಸಂದರ್ಭದಲ್ಲಿ ನೀಡಿದ್ದು ಟೈಮ್‌ ಸ್ಕ್ವ್ಯಾರ್‌ನ ಕಾರ್ಯಕ್ರಮದಲ್ಲಿ ಭಾರತದ ಯೋಗ, ಪ್ರಣಾಯಾಮ, ಆಯುರ್ವೇದ ಮತ್ತು ಭಾರತದ ಬುಡಕಟ್ಟುಗಳಲ್ಲಿರುವ  ಗಿಡಮೂಲಿಕೆ ಔಷಧಗಳ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಕೂಡ ನಡೆದಿದೆ.


ಇದನ್ನೂ ಓದಿ : ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...