Homeಕರ್ನಾಟಕಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

- Advertisement -
- Advertisement -

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ತುಂಬಿಸಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್. ಅಶೋಕ್‌. ಸೋಮವಾರ ನಡೆದ ರಾಜ್ಯ ವಿಧಾನಸಭೆಯ ಅಧಿವೇಶನದ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಕೆರೆಗಳ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಅವಾಂತರಗಳ ಕುರಿತು ವಿಧಾನಸಭೆಯಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರಿಸಿದ ಅಶೋಕ್ ಅವರು, “1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2 ರಿಂದ 4 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿಎಫ್‌ಟಿ) ನೀರು ಸಂಗ್ರಹವಾಗುತ್ತಿದ್ದ ಕೆರೆಗಳ ಮೇಲೆ ಲೇಔಟ್‌ಗಳನ್ನು ನಿರ್ಮಿಸಿರುವ ಪ್ರದೇಶಗಳ ಬಗ್ಗೆಯೂ ಕಂದಾಯ ಸಚಿವರು ತಿಳಿಸಿದ್ದಾರೆ. “ಕೆರೆ ಸಮತಟ್ಟು ಮಾಡಿರುವ ಈ ಪ್ರದೇಶಗಳಲ್ಲಿ ರಾಜಾಜಿನಗರ (1963), ಕೋರಮಂಗಲ (1965), ಡಾಲರ್ಸ್ ಕಾಲೋನಿ (1973), ದೊಮ್ಮಲೂರು (1977), HAL-I ಮತ್ತು HAL-II (1978), HSR I ಮತ್ತು II (1986) ಮತ್ತು ಇತರವುಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

“ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಪ್ರತಿಪಕ್ಷ ನಾಯಕರಿಂದ ಬಂದಿರುವ ಹೇಳಿಕೆಗಳನ್ನು ನೋಡಿದರೆ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಸರ್ವನಾಶವಾಯಿತು ಎಂಬಂತೆ ಹೇಳುತ್ತಿದ್ದಾರೆ” ಎಂದು ಅಶೋಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಜ್ಯವನ್ನು ಆಳಿದ ಕಾಂಗ್ರೆಸ್ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕರಾದ ಕೃಷ್ಟ ಬೈರೇಗೌಡ, ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿ, “ಇತಿಹಾಸವನ್ನು ನೆನಪಿಸಿಕೊಳ್ಳುವ ಮೂಲಕ ಆಡಳಿತಾರೂಢ ಸರ್ಕಾರ ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಸಮಗ್ರ ತನಿಖೆಗೆ ಆದೇಶಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. “ಅಭಿವೃದ್ಧಿಯ ಹೆಸರಿನಲ್ಲಿ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು. ಇದಕ್ಕಾಗಿ, ಈ ಭೂಮಿಯನ್ನು ಯಾವಾಗ ಮತ್ತು ಏಕೆ ಬಳಸಲಾಯಿತು ಎಂಬುದನ್ನು ತನಿಖೆ ಮಾಡುವುದು ಅವಶ್ಯಕ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

“ಯಾವ ರಾಜಕೀಯ ಶಕ್ತಿಗಳು ಕೆರೆಗಳ ಅತಿಕ್ರಮಣವನ್ನು ಖಚಿತಪಡಿಸಿದವು; ಯಾವ ಅಧಿಕಾರಿಗಳು ಕಾರ್ಯವನ್ನು ನಿರ್ವಹಿಸಿದರು; ಇತರರ ಹೆಸರಿನಲ್ಲಿ ಸಂಪತ್ತನ್ನು ಕೂಡಿಟ್ಟವರು ಯಾರು; 2007 ರ ನಂತರ ಯಾರು ಸಂಪತ್ತನ್ನು ಸಂಗ್ರಹಿಸಿದರು ಎಂಬುವುದನ್ನು ತನಿಖೆ ನಡೆಸುತ್ತೇವೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...