Homeಕರ್ನಾಟಕಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

- Advertisement -
- Advertisement -

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ತುಂಬಿಸಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್. ಅಶೋಕ್‌. ಸೋಮವಾರ ನಡೆದ ರಾಜ್ಯ ವಿಧಾನಸಭೆಯ ಅಧಿವೇಶನದ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಕೆರೆಗಳ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಅವಾಂತರಗಳ ಕುರಿತು ವಿಧಾನಸಭೆಯಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರಿಸಿದ ಅಶೋಕ್ ಅವರು, “1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2 ರಿಂದ 4 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿಎಫ್‌ಟಿ) ನೀರು ಸಂಗ್ರಹವಾಗುತ್ತಿದ್ದ ಕೆರೆಗಳ ಮೇಲೆ ಲೇಔಟ್‌ಗಳನ್ನು ನಿರ್ಮಿಸಿರುವ ಪ್ರದೇಶಗಳ ಬಗ್ಗೆಯೂ ಕಂದಾಯ ಸಚಿವರು ತಿಳಿಸಿದ್ದಾರೆ. “ಕೆರೆ ಸಮತಟ್ಟು ಮಾಡಿರುವ ಈ ಪ್ರದೇಶಗಳಲ್ಲಿ ರಾಜಾಜಿನಗರ (1963), ಕೋರಮಂಗಲ (1965), ಡಾಲರ್ಸ್ ಕಾಲೋನಿ (1973), ದೊಮ್ಮಲೂರು (1977), HAL-I ಮತ್ತು HAL-II (1978), HSR I ಮತ್ತು II (1986) ಮತ್ತು ಇತರವುಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

“ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಪ್ರತಿಪಕ್ಷ ನಾಯಕರಿಂದ ಬಂದಿರುವ ಹೇಳಿಕೆಗಳನ್ನು ನೋಡಿದರೆ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಸರ್ವನಾಶವಾಯಿತು ಎಂಬಂತೆ ಹೇಳುತ್ತಿದ್ದಾರೆ” ಎಂದು ಅಶೋಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಜ್ಯವನ್ನು ಆಳಿದ ಕಾಂಗ್ರೆಸ್ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕರಾದ ಕೃಷ್ಟ ಬೈರೇಗೌಡ, ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿ, “ಇತಿಹಾಸವನ್ನು ನೆನಪಿಸಿಕೊಳ್ಳುವ ಮೂಲಕ ಆಡಳಿತಾರೂಢ ಸರ್ಕಾರ ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಸಮಗ್ರ ತನಿಖೆಗೆ ಆದೇಶಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. “ಅಭಿವೃದ್ಧಿಯ ಹೆಸರಿನಲ್ಲಿ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು. ಇದಕ್ಕಾಗಿ, ಈ ಭೂಮಿಯನ್ನು ಯಾವಾಗ ಮತ್ತು ಏಕೆ ಬಳಸಲಾಯಿತು ಎಂಬುದನ್ನು ತನಿಖೆ ಮಾಡುವುದು ಅವಶ್ಯಕ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

“ಯಾವ ರಾಜಕೀಯ ಶಕ್ತಿಗಳು ಕೆರೆಗಳ ಅತಿಕ್ರಮಣವನ್ನು ಖಚಿತಪಡಿಸಿದವು; ಯಾವ ಅಧಿಕಾರಿಗಳು ಕಾರ್ಯವನ್ನು ನಿರ್ವಹಿಸಿದರು; ಇತರರ ಹೆಸರಿನಲ್ಲಿ ಸಂಪತ್ತನ್ನು ಕೂಡಿಟ್ಟವರು ಯಾರು; 2007 ರ ನಂತರ ಯಾರು ಸಂಪತ್ತನ್ನು ಸಂಗ್ರಹಿಸಿದರು ಎಂಬುವುದನ್ನು ತನಿಖೆ ನಡೆಸುತ್ತೇವೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....