HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...