HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...