HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...