HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...