HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...