Homeಮುಖಪುಟಪಪುವಾ ನ್ಯೂಗಿನಿಯಾ| ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ: 60ಕ್ಕೂ ಅಧಿಕ ಮಂದಿ ಸಾವು

ಪಪುವಾ ನ್ಯೂಗಿನಿಯಾ| ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ: 60ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದ ಬುಡಕಟ್ಟು ಜನಾಂಗದವರ ನಡುವೆ ನಡೆದ ಸಂಘರ್ಷದಲ್ಲಿ 60ಕ್ಕೂ ಅಧಿಕ ಮಂದಿ ಹತ್ಯೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜಧಾನಿ ಪೋರ್ಟ್ ಮೋರೆಸ್ಬಿಯ ವಾಯುವ್ಯಕ್ಕೆ 600 ಕಿ.ಮೀ ದೂರದ ವಾಬಾಗ್ ಪಟ್ಟಣದ ಬಳಿ ಭಾನುವಾರ ಘಟನೆ ನಡೆದಿದೆ. ಇದು ಸಿಕಿನ್ ಮತ್ತು ಕೇಕಿನ್ ಬುಡಕಟ್ಟು ಜನಾಂಗದವರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ 53 ಪುರುಷರ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ. ನಿಖರವಾದ ಸಾವಿನ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಭಾರೀ ಗುಂಡಿನ ದಾಳಿ ನಡೆದ ಮಾಹಿತಿಯಿದೆ ಸ್ಥಳೀಯ ಪೊಲೀಸ್ ಆಯುಕ್ತ ಡೇವಿಡ್ ಮ್ಯಾನಿಂಗ್ ಭಾನುವಾರ ಹೇಳಿದ್ದರು. ಆದರೆ, ಇಂದು ಬೆಳಿಗ್ಗೆ ಸಾವಿನ ಸಂಖ್ಯೆ 60 ದಾಟಿದೆ ಎಂದು ವರದಿಯಾಗಿದೆ.

ಅಕ್ರಮ ಶಸ್ತಾಸ್ತ್ರ ಪೂರೈಕೆ ಸಂಘರ್ಷವನ್ನು ಅತ್ಯಂತ ಭೀಕರವಾಗಿಸಿದೆ. ಸಂಘರ್ಷದಲ್ಲಿ ತೊಡಗಿದ್ದವರು ಪರಸ್ಪರ ಎಕೆ 47ನಂತಹ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿದ್ದರು ಎಂದು ಮಾಧ್ಯಮಗಳು ತಿಳಿಸಿವೆ.

ಪಪುವಾ ನ್ಯೂಗಿನಿಯಾದಲ್ಲಿ ಬುಡಕಟ್ಟು ಜನಾಂಗಗಳ ನಡುವೆ ಆಗಾಗ ಸಂಘರ್ಷಗಳು ನಡೆಯುತ್ತಿರುತ್ತವೆ. ಅವುಗಳಲ್ಲಿ ಈ ಘಟನೆ ಅತ್ಯಂತ ಭೀಕರವಾಗಿದೆ. ಕಳೆದ ಜುಲೈನಲ್ಲಿ ದೇಶದ ಎಂಗಾ ಪ್ರದೇಶದಲ್ಲಿ ಬುಡಕಟ್ಟು ಸಂಘರ್ಷ ನಿಯಂತ್ರಿಸಲು ಸ್ಥಳೀಯ ಆಡಳಿತ ಮೂರು ತಿಂಗಳು ಲಾಕ್‌ಡೌನ್‌ ರೀತಿ ನಿರ್ಬಂಧ ಜಾರಿಗೊಳಿಸಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ಸಂಘರ್ಷದಲ್ಲಿ ಮೂವರು ವ್ಯಕ್ತಿಗಳನ್ನು ಸಾವನ್ನಪ್ಪಿದ ದೃಶ್ಯ ಒಳಗೊಂಡ ಗ್ರಾಫಿಕ್ ತುಣುಕೊಂದನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಆ ಬಳಿಕ ಹಿಂಸಾಚಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಇದನ್ನೂ ಓದಿ : ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....