Homeಮುಖಪುಟವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಭಾರತದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗುತ್ತಿದ್ದಾರೆ. 2022ರಲ್ಲಿ 6,000ಕ್ಕೂ ಅಧಿಕ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಸಾವುಗಳು ದಾಖಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ.

ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ 2022ರಲ್ಲಿ 13,479 ಪ್ರಕರಣಗಳು ದಾಖಲಾಗಿವೆ. ಅದೇ  ಸಮಯದಲ್ಲಿ 6,450 ವರದಕ್ಷಿಣೆ ಸಾವುಗಳು ಕೂಡ ದಾಖಲಾಗಿವೆ. ವರದಕ್ಷಿಣೆ ಸಾವುಗಳು ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದರೂ ಅಂಕಿಅಂಶಗಳು ಇನ್ನೂ ಆತಂಕಕ್ಕೆ ಕಾರಣವಾಗಿವೆ.

2022ರಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆಯಲ್ಲಿ 4.5% ಇಳಿಕೆಯಾಗಿದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ 1961 ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ 0.6% ಇಳಿಕೆಯಾಗಿದೆ. 2022ರಲ್ಲಿ ಉತ್ತರಪ್ರದೇಶದಲ್ಲಿ 2,218 ಘಟನೆಗಳೊಂದಿಗೆ ಅತಿ ಹೆಚ್ಚು ವರದಕ್ಷಿಣೆ ಸಾವುಗಳು ಸಂಭವಿಸಿವೆ. ಬಿಹಾರದಲ್ಲಿ 1,057 ಮತ್ತು ಮಧ್ಯಪ್ರದೇಶದಲ್ಲಿ 518 ವರದಕ್ಷಿಣೆಗೆ ಸಂಬಂಧಿಸಿದ ಸಾವುಗಳು ವರದಿಯಾಗಿದೆ.

ವರದಕ್ಷಿಣೆ ನಿಷೇಧ ಕಾಯ್ದೆ 1961ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಉತ್ತರಪ್ರದೇಶದಲ್ಲಿ  4,807 ಪ್ರಕರಣಗಳು ದಾಖಲಾಗಿದೆ. ಇದು ದೇಶದಲ್ಲೇ ಅತಿಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ.  ಬಿಹಾರದಲ್ಲಿ 3,580 ಪ್ರಕರಣಗಳು ದಾಖಲಾಗಿದ್ದು ಎರಡನೇ ಸ್ಥಾನದಲ್ಲಿದೆ ಮತ್ತು ಕರ್ನಾಟಕದಲ್ಲಿ 2,224 ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ರಾಜ್ಯಗಳಲ್ಲಿ ಒಟ್ಟು ವರದಕ್ಷಿಣೆ ಸಾವುಗಳ ಸಂಖ್ಯೆ 442 ರಷ್ಟಿದ್ದು, ಕರ್ನಾಟಕವು 167 ಸಾವಿನೊಂದಿಗೆ ಮುಂಚೂಣಿಯಲ್ಲಿದೆ. ನಂತರ ತೆಲಂಗಾಣದಲ್ಲಿ 137, ತಮಿಳುನಾಡಿನಲ್ಲಿ 29 ಮತ್ತು ಕೇರಳದಲ್ಲಿ 11 ಸಾವುಗಳು ವರದಿಯಾಗಿದೆ . ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ ದಾಖಲಾದ ದಕ್ಷಿಣ ರಾಜ್ಯಗಳ ಒಟ್ಟು ಪ್ರಕರಣಗಳ ಸಂಖ್ಯೆ 2,776 ಇದೆ. ಇದರಲ್ಲಿ ಕರ್ನಾಟಕವೊಂದರಲ್ಲೇ 2,224 ಪ್ರಕರಣಗಳು ದಾಖಲಾಗಿದೆ. ಆಂಧ್ರಪ್ರದೇಶದಲ್ಲಿ 298 ಪ್ರಕರಣಗಳು, ತಮಿಳುನಾಡಿನಲ್ಲಿ 220 ಪ್ರಕರಣಗಳು, ಕೇರಳದಲ್ಲಿ 28 ಪ್ರಕರಣಗಳು ಮತ್ತು ತೆಲಂಗಾಣದಲ್ಲಿ 6 ಪ್ರಕರಣಗಳು ದಾಖಲಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ದೂರುಗಳು ನಿಜವಾಗಿದ್ದರೂ ಸಾಕಷ್ಟು ಪುರಾವೆಗಳಿಲ್ಲದ ಕಾರಣ 359 ವರದಕ್ಷಿಣೆ ಸಾವು ಪ್ರಕರಣಗಳನ್ನು ಮುಚ್ಚಲಾಗಿದೆ. ಐದು ವರದಕ್ಷಿಣೆ ಸಾವು ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಲಾಗಿದೆ.

ಎನ್‌ಸಿಆರ್‌ಬಿ ವರದಿಯು ದೂರು ದಾಖಲಾದ ಪ್ರಕರಣವನ್ನು ಉಲ್ಲೇಖಿಸಿ ದತ್ತಾಂಶವನ್ನು ಸಿದ್ದಪಡಿಸಿದೆ. ಆದರೆ ದೂರು ದಾಖಲಾಗದ ವರದಕ್ಷಿಣೆ ಕಿರುಕುಳ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...