Homeಮುಖಪುಟವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಭಾರತದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗುತ್ತಿದ್ದಾರೆ. 2022ರಲ್ಲಿ 6,000ಕ್ಕೂ ಅಧಿಕ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಸಾವುಗಳು ದಾಖಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ.

ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ 2022ರಲ್ಲಿ 13,479 ಪ್ರಕರಣಗಳು ದಾಖಲಾಗಿವೆ. ಅದೇ  ಸಮಯದಲ್ಲಿ 6,450 ವರದಕ್ಷಿಣೆ ಸಾವುಗಳು ಕೂಡ ದಾಖಲಾಗಿವೆ. ವರದಕ್ಷಿಣೆ ಸಾವುಗಳು ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದರೂ ಅಂಕಿಅಂಶಗಳು ಇನ್ನೂ ಆತಂಕಕ್ಕೆ ಕಾರಣವಾಗಿವೆ.

2022ರಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆಯಲ್ಲಿ 4.5% ಇಳಿಕೆಯಾಗಿದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ 1961 ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ 0.6% ಇಳಿಕೆಯಾಗಿದೆ. 2022ರಲ್ಲಿ ಉತ್ತರಪ್ರದೇಶದಲ್ಲಿ 2,218 ಘಟನೆಗಳೊಂದಿಗೆ ಅತಿ ಹೆಚ್ಚು ವರದಕ್ಷಿಣೆ ಸಾವುಗಳು ಸಂಭವಿಸಿವೆ. ಬಿಹಾರದಲ್ಲಿ 1,057 ಮತ್ತು ಮಧ್ಯಪ್ರದೇಶದಲ್ಲಿ 518 ವರದಕ್ಷಿಣೆಗೆ ಸಂಬಂಧಿಸಿದ ಸಾವುಗಳು ವರದಿಯಾಗಿದೆ.

ವರದಕ್ಷಿಣೆ ನಿಷೇಧ ಕಾಯ್ದೆ 1961ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಉತ್ತರಪ್ರದೇಶದಲ್ಲಿ  4,807 ಪ್ರಕರಣಗಳು ದಾಖಲಾಗಿದೆ. ಇದು ದೇಶದಲ್ಲೇ ಅತಿಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ.  ಬಿಹಾರದಲ್ಲಿ 3,580 ಪ್ರಕರಣಗಳು ದಾಖಲಾಗಿದ್ದು ಎರಡನೇ ಸ್ಥಾನದಲ್ಲಿದೆ ಮತ್ತು ಕರ್ನಾಟಕದಲ್ಲಿ 2,224 ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ರಾಜ್ಯಗಳಲ್ಲಿ ಒಟ್ಟು ವರದಕ್ಷಿಣೆ ಸಾವುಗಳ ಸಂಖ್ಯೆ 442 ರಷ್ಟಿದ್ದು, ಕರ್ನಾಟಕವು 167 ಸಾವಿನೊಂದಿಗೆ ಮುಂಚೂಣಿಯಲ್ಲಿದೆ. ನಂತರ ತೆಲಂಗಾಣದಲ್ಲಿ 137, ತಮಿಳುನಾಡಿನಲ್ಲಿ 29 ಮತ್ತು ಕೇರಳದಲ್ಲಿ 11 ಸಾವುಗಳು ವರದಿಯಾಗಿದೆ . ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ ದಾಖಲಾದ ದಕ್ಷಿಣ ರಾಜ್ಯಗಳ ಒಟ್ಟು ಪ್ರಕರಣಗಳ ಸಂಖ್ಯೆ 2,776 ಇದೆ. ಇದರಲ್ಲಿ ಕರ್ನಾಟಕವೊಂದರಲ್ಲೇ 2,224 ಪ್ರಕರಣಗಳು ದಾಖಲಾಗಿದೆ. ಆಂಧ್ರಪ್ರದೇಶದಲ್ಲಿ 298 ಪ್ರಕರಣಗಳು, ತಮಿಳುನಾಡಿನಲ್ಲಿ 220 ಪ್ರಕರಣಗಳು, ಕೇರಳದಲ್ಲಿ 28 ಪ್ರಕರಣಗಳು ಮತ್ತು ತೆಲಂಗಾಣದಲ್ಲಿ 6 ಪ್ರಕರಣಗಳು ದಾಖಲಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ದೂರುಗಳು ನಿಜವಾಗಿದ್ದರೂ ಸಾಕಷ್ಟು ಪುರಾವೆಗಳಿಲ್ಲದ ಕಾರಣ 359 ವರದಕ್ಷಿಣೆ ಸಾವು ಪ್ರಕರಣಗಳನ್ನು ಮುಚ್ಚಲಾಗಿದೆ. ಐದು ವರದಕ್ಷಿಣೆ ಸಾವು ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಲಾಗಿದೆ.

ಎನ್‌ಸಿಆರ್‌ಬಿ ವರದಿಯು ದೂರು ದಾಖಲಾದ ಪ್ರಕರಣವನ್ನು ಉಲ್ಲೇಖಿಸಿ ದತ್ತಾಂಶವನ್ನು ಸಿದ್ದಪಡಿಸಿದೆ. ಆದರೆ ದೂರು ದಾಖಲಾಗದ ವರದಕ್ಷಿಣೆ ಕಿರುಕುಳ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...