Homeಮುಖಪುಟವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಭಾರತದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗುತ್ತಿದ್ದಾರೆ. 2022ರಲ್ಲಿ 6,000ಕ್ಕೂ ಅಧಿಕ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಸಾವುಗಳು ದಾಖಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ.

ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ 2022ರಲ್ಲಿ 13,479 ಪ್ರಕರಣಗಳು ದಾಖಲಾಗಿವೆ. ಅದೇ  ಸಮಯದಲ್ಲಿ 6,450 ವರದಕ್ಷಿಣೆ ಸಾವುಗಳು ಕೂಡ ದಾಖಲಾಗಿವೆ. ವರದಕ್ಷಿಣೆ ಸಾವುಗಳು ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದರೂ ಅಂಕಿಅಂಶಗಳು ಇನ್ನೂ ಆತಂಕಕ್ಕೆ ಕಾರಣವಾಗಿವೆ.

2022ರಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆಯಲ್ಲಿ 4.5% ಇಳಿಕೆಯಾಗಿದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ 1961 ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ 0.6% ಇಳಿಕೆಯಾಗಿದೆ. 2022ರಲ್ಲಿ ಉತ್ತರಪ್ರದೇಶದಲ್ಲಿ 2,218 ಘಟನೆಗಳೊಂದಿಗೆ ಅತಿ ಹೆಚ್ಚು ವರದಕ್ಷಿಣೆ ಸಾವುಗಳು ಸಂಭವಿಸಿವೆ. ಬಿಹಾರದಲ್ಲಿ 1,057 ಮತ್ತು ಮಧ್ಯಪ್ರದೇಶದಲ್ಲಿ 518 ವರದಕ್ಷಿಣೆಗೆ ಸಂಬಂಧಿಸಿದ ಸಾವುಗಳು ವರದಿಯಾಗಿದೆ.

ವರದಕ್ಷಿಣೆ ನಿಷೇಧ ಕಾಯ್ದೆ 1961ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಉತ್ತರಪ್ರದೇಶದಲ್ಲಿ  4,807 ಪ್ರಕರಣಗಳು ದಾಖಲಾಗಿದೆ. ಇದು ದೇಶದಲ್ಲೇ ಅತಿಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ.  ಬಿಹಾರದಲ್ಲಿ 3,580 ಪ್ರಕರಣಗಳು ದಾಖಲಾಗಿದ್ದು ಎರಡನೇ ಸ್ಥಾನದಲ್ಲಿದೆ ಮತ್ತು ಕರ್ನಾಟಕದಲ್ಲಿ 2,224 ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ರಾಜ್ಯಗಳಲ್ಲಿ ಒಟ್ಟು ವರದಕ್ಷಿಣೆ ಸಾವುಗಳ ಸಂಖ್ಯೆ 442 ರಷ್ಟಿದ್ದು, ಕರ್ನಾಟಕವು 167 ಸಾವಿನೊಂದಿಗೆ ಮುಂಚೂಣಿಯಲ್ಲಿದೆ. ನಂತರ ತೆಲಂಗಾಣದಲ್ಲಿ 137, ತಮಿಳುನಾಡಿನಲ್ಲಿ 29 ಮತ್ತು ಕೇರಳದಲ್ಲಿ 11 ಸಾವುಗಳು ವರದಿಯಾಗಿದೆ . ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ ದಾಖಲಾದ ದಕ್ಷಿಣ ರಾಜ್ಯಗಳ ಒಟ್ಟು ಪ್ರಕರಣಗಳ ಸಂಖ್ಯೆ 2,776 ಇದೆ. ಇದರಲ್ಲಿ ಕರ್ನಾಟಕವೊಂದರಲ್ಲೇ 2,224 ಪ್ರಕರಣಗಳು ದಾಖಲಾಗಿದೆ. ಆಂಧ್ರಪ್ರದೇಶದಲ್ಲಿ 298 ಪ್ರಕರಣಗಳು, ತಮಿಳುನಾಡಿನಲ್ಲಿ 220 ಪ್ರಕರಣಗಳು, ಕೇರಳದಲ್ಲಿ 28 ಪ್ರಕರಣಗಳು ಮತ್ತು ತೆಲಂಗಾಣದಲ್ಲಿ 6 ಪ್ರಕರಣಗಳು ದಾಖಲಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ದೂರುಗಳು ನಿಜವಾಗಿದ್ದರೂ ಸಾಕಷ್ಟು ಪುರಾವೆಗಳಿಲ್ಲದ ಕಾರಣ 359 ವರದಕ್ಷಿಣೆ ಸಾವು ಪ್ರಕರಣಗಳನ್ನು ಮುಚ್ಚಲಾಗಿದೆ. ಐದು ವರದಕ್ಷಿಣೆ ಸಾವು ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಲಾಗಿದೆ.

ಎನ್‌ಸಿಆರ್‌ಬಿ ವರದಿಯು ದೂರು ದಾಖಲಾದ ಪ್ರಕರಣವನ್ನು ಉಲ್ಲೇಖಿಸಿ ದತ್ತಾಂಶವನ್ನು ಸಿದ್ದಪಡಿಸಿದೆ. ಆದರೆ ದೂರು ದಾಖಲಾಗದ ವರದಕ್ಷಿಣೆ ಕಿರುಕುಳ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...