Homeಕರೋನಾ ತಲ್ಲಣಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...