Homeಮುಖಪುಟ2019-20 ರಲ್ಲಿ ಕಾರ್ಪೋರೇಟ್‌ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!

2019-20 ರಲ್ಲಿ ಕಾರ್ಪೋರೇಟ್‌ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!

ಕಾಂಗ್ರೆಸ್‌‌, ಎನ್‌ಸಿಪಿ, ಸಿಪಿಐ, ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್‌ ಪಡೆದ ಒಟ್ಟು ದೇಣಿಗಿಂತಲೂ ಮೂರು ಪಟ್ಟು ಹೆಚ್ಚಿನ ದೇಣಿಗೆಯನ್ನು ಬಿಜೆಪಿ ಪಡೆದಿದೆ.

- Advertisement -
- Advertisement -

2019-20 ರಲ್ಲಿ ರಾಜಕೀಯ ಪಕ್ಷಗಳಿಗೆ ಸಿಕ್ಕಿದ ದೇಣಿಗೆಗಳಲ್ಲಿ ಬಿಜೆಪಿಯದ್ದೇ ಸಿಂಹಪಾಲಿದೆ. ಪಕ್ಷವು ಟ್ರಸ್ಟ್‌ಗಳು, ವ್ಯಕ್ತಿಗಳು ಮತ್ತು ಕಾರ್ಪೊರೇಟ್ ಸೇರಿದಂತೆ ಒಟ್ಟು 5,576 ದೇಣಿಗೆಗಳ ಮೂಲಕ 20 ಸಾವಿರ ರೂ. ಗಿಂತಲೂ ಹೆಚ್ಚಿನ ದೇಣಿಗೆಯನ್ನು ಪಡೆದಿದ್ದು, ಇದರ ಒಟ್ಟು ಮೊತ್ತ 785.77 ಕೋಟಿ ರೂ. ಆಗುತ್ತದೆ ಎಂದು ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ.

ವಿರೋಧ ಪಕ್ಷವಾದ ಕಾಂಗ್ರೆಸ್ 350 ದೇಣಿಗೆದಾರರಿಂದ 139.016 ಕೋಟಿ ರೂ. ಗಳಿಸಿದೆ. ಇದು ಬಿಜೆಪಿ ಸ್ವೀಕರಿಸಿದ ಮೊತ್ತಕ್ಕಿಂತ ಐದು ಪಟ್ಟು ಕಡಿಮೆ ಮೊತ್ತವಾಗಿದೆ.

ಕಾಂಗ್ರೆಸ್‌‌, ಎನ್‌ಸಿಪಿ, ಸಿಪಿಐ, ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್‌ ಪಡೆದ ಒಟ್ಟು ದೇಣಿಗೆಯ ಮೊತ್ತ 228.035 ಕೋಟಿಯಾಗಿದ್ದು, ಈ ಎಲ್ಲಾ ಪಕ್ಷಗಳು ಪಡೆದ ಒಟ್ಟು ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚಿನ ದೇಣಿಗೆಯನ್ನು ಬಿಜೆಪಿ ಪಡೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ಕುತೂಹಲಕಾರಿ ಘಟನೆಯಲ್ಲಿ ಮಹಾರಾಷ್ಟ್ರ ಅಮರಾವತಿ ಮುನ್ಸಿಪಲ್ ಕಾರ್ಪೊರೇಶನ್‌ನಿಂದ 4.80 ಲಕ್ಷ ರೂ. ದೇಣಿಗೆ ಪಡೆದಿರುವುದಾಗಿ ಬಿಜೆಪಿ ಘೋಷಿಸಿದೆ. ಈ ದೇಣಿಗೆ ನೀಡಿದವರ ವಿಳಾಸ, ಬ್ಯಾಂಕ್ ಹೆಸರು, ಪ್ಯಾನ್ ಇತ್ಯಾದಿಗಳ ವಿವರಗಳನ್ನು ಪಕ್ಷವು ಬಹಿರಂಗಪಡಿಸಿಲ್ಲ. ಅದಾಗ್ಯೂ, ಸರ್ಕಾರಿ ಸಂಸ್ಥೆಯೊಂದು ರಾಜಕೀಯ ಪಕ್ಷಕ್ಕೆ ಕೊಡುಗೆ ನೀಡುವುದು ಕಾನೂನಾತ್ಮಕವಾಗಿ ಸರಿಯೆ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಎಡಿಆರ್‌ ಹೇಳಿದೆ.

ಇಷ್ಟೇ ಅಲ್ಲದೆ, ಬಿಜೆಪಿ ತನ್ನ ಘೋಷಣೆಯಲ್ಲಿ ಕನಿಷ್ಠ ಮೂರು ದಾನಿಗಳಿಂದ 1.516 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆಯಲಾಗಿದೆ ಎಂದು ಹೇಳಿದೆ. “ಈ ಮೂರು ದೇಣಿಗೆಗಳು ಬಿಹಾರದ ಝಂಜಾರಪುರದಿಂದ ನೀಡಲಾಗಿದ್ದು, ಒಂದೊಂದು ಭೂಮಿಯು 36.80 ಲಕ್ಷ ರೂ., 50 ಲಕ್ಷ ರೂ., ಮತ್ತು  64.88 ಲಕ್ಷ ರೂ. ಮೌಲ್ಯದ್ದಾಗಿದೆ” ಎಂದು ADR ವರದಿ ಹೇಳಿದೆ.

ಆದರೆ ಬಿಜೆಪಿ ದಾನಿಗಳ ವಿಳಾಸ, ಪ್ಯಾನ್ ಕಾರ್ಡ್ ಮಾಹಿತಿಯನ್ನು ಒದಗಿಸಿಲ್ಲ. ಜೊತೆಗೆ ಭೂಮಿ ಕೃಷಿಭೂಮಿಯೇ ಅಥವಾ ವಾಣಿಜ್ಯವೇ ಎಂಬುದನ್ನೂ ಕೂಡ ಬಹಿರಂಗಪಡಿಸಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರು ಬ್ರಷ್ಟಾಚಾರದ ಮೂಲ, ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ!?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...