Homeಮುಖಪುಟ2019-20 ರಲ್ಲಿ ಕಾರ್ಪೋರೇಟ್‌ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!

2019-20 ರಲ್ಲಿ ಕಾರ್ಪೋರೇಟ್‌ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!

ಕಾಂಗ್ರೆಸ್‌‌, ಎನ್‌ಸಿಪಿ, ಸಿಪಿಐ, ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್‌ ಪಡೆದ ಒಟ್ಟು ದೇಣಿಗಿಂತಲೂ ಮೂರು ಪಟ್ಟು ಹೆಚ್ಚಿನ ದೇಣಿಗೆಯನ್ನು ಬಿಜೆಪಿ ಪಡೆದಿದೆ.

- Advertisement -
- Advertisement -

2019-20 ರಲ್ಲಿ ರಾಜಕೀಯ ಪಕ್ಷಗಳಿಗೆ ಸಿಕ್ಕಿದ ದೇಣಿಗೆಗಳಲ್ಲಿ ಬಿಜೆಪಿಯದ್ದೇ ಸಿಂಹಪಾಲಿದೆ. ಪಕ್ಷವು ಟ್ರಸ್ಟ್‌ಗಳು, ವ್ಯಕ್ತಿಗಳು ಮತ್ತು ಕಾರ್ಪೊರೇಟ್ ಸೇರಿದಂತೆ ಒಟ್ಟು 5,576 ದೇಣಿಗೆಗಳ ಮೂಲಕ 20 ಸಾವಿರ ರೂ. ಗಿಂತಲೂ ಹೆಚ್ಚಿನ ದೇಣಿಗೆಯನ್ನು ಪಡೆದಿದ್ದು, ಇದರ ಒಟ್ಟು ಮೊತ್ತ 785.77 ಕೋಟಿ ರೂ. ಆಗುತ್ತದೆ ಎಂದು ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ.

ವಿರೋಧ ಪಕ್ಷವಾದ ಕಾಂಗ್ರೆಸ್ 350 ದೇಣಿಗೆದಾರರಿಂದ 139.016 ಕೋಟಿ ರೂ. ಗಳಿಸಿದೆ. ಇದು ಬಿಜೆಪಿ ಸ್ವೀಕರಿಸಿದ ಮೊತ್ತಕ್ಕಿಂತ ಐದು ಪಟ್ಟು ಕಡಿಮೆ ಮೊತ್ತವಾಗಿದೆ.

ಕಾಂಗ್ರೆಸ್‌‌, ಎನ್‌ಸಿಪಿ, ಸಿಪಿಐ, ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್‌ ಪಡೆದ ಒಟ್ಟು ದೇಣಿಗೆಯ ಮೊತ್ತ 228.035 ಕೋಟಿಯಾಗಿದ್ದು, ಈ ಎಲ್ಲಾ ಪಕ್ಷಗಳು ಪಡೆದ ಒಟ್ಟು ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚಿನ ದೇಣಿಗೆಯನ್ನು ಬಿಜೆಪಿ ಪಡೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ಕುತೂಹಲಕಾರಿ ಘಟನೆಯಲ್ಲಿ ಮಹಾರಾಷ್ಟ್ರ ಅಮರಾವತಿ ಮುನ್ಸಿಪಲ್ ಕಾರ್ಪೊರೇಶನ್‌ನಿಂದ 4.80 ಲಕ್ಷ ರೂ. ದೇಣಿಗೆ ಪಡೆದಿರುವುದಾಗಿ ಬಿಜೆಪಿ ಘೋಷಿಸಿದೆ. ಈ ದೇಣಿಗೆ ನೀಡಿದವರ ವಿಳಾಸ, ಬ್ಯಾಂಕ್ ಹೆಸರು, ಪ್ಯಾನ್ ಇತ್ಯಾದಿಗಳ ವಿವರಗಳನ್ನು ಪಕ್ಷವು ಬಹಿರಂಗಪಡಿಸಿಲ್ಲ. ಅದಾಗ್ಯೂ, ಸರ್ಕಾರಿ ಸಂಸ್ಥೆಯೊಂದು ರಾಜಕೀಯ ಪಕ್ಷಕ್ಕೆ ಕೊಡುಗೆ ನೀಡುವುದು ಕಾನೂನಾತ್ಮಕವಾಗಿ ಸರಿಯೆ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಎಡಿಆರ್‌ ಹೇಳಿದೆ.

ಇಷ್ಟೇ ಅಲ್ಲದೆ, ಬಿಜೆಪಿ ತನ್ನ ಘೋಷಣೆಯಲ್ಲಿ ಕನಿಷ್ಠ ಮೂರು ದಾನಿಗಳಿಂದ 1.516 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆಯಲಾಗಿದೆ ಎಂದು ಹೇಳಿದೆ. “ಈ ಮೂರು ದೇಣಿಗೆಗಳು ಬಿಹಾರದ ಝಂಜಾರಪುರದಿಂದ ನೀಡಲಾಗಿದ್ದು, ಒಂದೊಂದು ಭೂಮಿಯು 36.80 ಲಕ್ಷ ರೂ., 50 ಲಕ್ಷ ರೂ., ಮತ್ತು  64.88 ಲಕ್ಷ ರೂ. ಮೌಲ್ಯದ್ದಾಗಿದೆ” ಎಂದು ADR ವರದಿ ಹೇಳಿದೆ.

ಆದರೆ ಬಿಜೆಪಿ ದಾನಿಗಳ ವಿಳಾಸ, ಪ್ಯಾನ್ ಕಾರ್ಡ್ ಮಾಹಿತಿಯನ್ನು ಒದಗಿಸಿಲ್ಲ. ಜೊತೆಗೆ ಭೂಮಿ ಕೃಷಿಭೂಮಿಯೇ ಅಥವಾ ವಾಣಿಜ್ಯವೇ ಎಂಬುದನ್ನೂ ಕೂಡ ಬಹಿರಂಗಪಡಿಸಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರು ಬ್ರಷ್ಟಾಚಾರದ ಮೂಲ, ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ!?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...