Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...