Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...