Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...