Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...