Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...