Homeಕರೋನಾ ತಲ್ಲಣನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ, ದೇಹದ ಇಮ್ಯುನಿಟಿ ನಮ್ಮನ್ನು ರಕ್ಷಿಸುತ್ತದೆ: ಡಾ ಗುಲೇರಿಯಾ

ಒಂದು ವ್ಯವಸ್ಥಿತ ಖಾಯಿಲೆಯಾಗುತ್ತಿರುವ ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ರೋಗನಿರೋಧಕ ಪ್ರಕ್ರಿಯೆಯ ದತ್ತಾಂಶದ ಪ್ರಕಾರ, ಪ್ರಸ್ತುತ ನಾವು ನಂಬುತ್ತಿರುವುದಕ್ಕಿಂತ ಹೆಚ್ಚಾಗಿ “ನಾವು ರಕ್ಷಿಸಲ್ಪಡಬಹುದು” ಎಂದು ಏಮ್ಸ್ ನಿರ್ದೇಶಕ ಮತ್ತು ದೇಶದ ಕೊರೊನಾ ಕಾರ್ಯಪಡೆಯನ್ನು ಮುನ್ನಡೆಸುತ್ತಿರುವ ತಜ್ಞರಲ್ಲಿ ಒಬ್ಬರಾದ ಡಾ. ರಂದೀಪ್ ಗುಲೇರಿಯಾದ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದರು.

ಕೊರೊನಾ ಕೇವಲ ಶ್ವಾಸಕೋಶವನ್ನು ಮಾತ್ರವಲ್ಲದೇ, ಮೆದುಳು ಮತ್ತು ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರಬಹುದು ಎನ್ನುವ ಕಠೋರ ವಾಸ್ತವವೊಂದು ಬೆಳಕಿಗೆ ಬಂದಿದೆ ಎಂದು ಡಾ. ಗುಲೇರಿಯಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೊರೊನಾ ಕಾರ್ಯಪಡೆಯ ಕ್ಲಿನಿಕಲ್ ರಿಸರ್ಚ್ ಗ್ರೂಪಿನ ಮುಖ್ಯಸ್ಥರಾದ ಡಾ. ಗುಲೇರಿಯಾ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಚೇತರಿಸಿಕೊಂಡ ನಂತರವೂ ಅವರ ಶ್ವಾಸಕೋಶವು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಹಾಗಾಗಿ ಅವರಿಗೆ ಆಮ್ಲಜನಕದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ರೋಗಿಗಳು ಈಗ ಪಾರ್ಶ್ವವಾಯು ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ಇದು ಉಸಿರಾಟದ ತೊಂದರೆಗಿಂತ  ಹೆಚ್ಚಾಗಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ದೇಶದ ಉನ್ನತ ಶ್ವಾಸಕೋಶತಜ್ಞ ಡಾ.ಗುಲೇರಿಯಾ ಹೇಳಿದ್ದಾರೆ.

“ಮೊದಮೊದಲು ಇದು ಕೇವಲ ನ್ಯುಮೋನಿಯಾ ಎಂದು ನಾವು ಭಾವಿಸಿದ್ದೆವು. ಆದರೆ ನಂತರ ತಿಳಿಯಿಯಿತು ಇದು hypercoagulable ಸ್ಥಿತಿಗೆ ಕಾರಣವಾಗಿದೆ ಎಂದು. ಇದು ಹೆಪ್ಪುಗಟ್ಟುವಿಕೆಯನ್ನು ಉಲ್ಬಣಗೊಳಿಸುತ್ತದೆ. ನಂತರ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳ ಹೆಪ್ಪುಗಟ್ಟುವಿಕೆಯಿಂದ ಜನರು ಹಠಾತ್ತನೆ ಸಾಯುತ್ತಿದ್ದರು. ಈಗ ನಾವು ಪಾರ್ಶ್ವವಾಯು ಮತ್ತು ಇತರ ಮೆದುಳು ಸಂಬಂಧಿ ಸಮಸ್ಯೆಗಳೊಂದಿಗೆ ಏನಾದರೂ ತೊಂದರೆಯಾಗುತ್ತಿದೆಯೇ ಎಂದು ನೋಡಲಾರಂಭಿಸಿದ್ದೇವೆ. ಆರಂಭದಲ್ಲಿ, ಇದೆಲ್ಲವೂ ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು, ಆದರೆ ನಾವು ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದಂತೆ, ಇದು ಒಂದು ಸಮಸ್ಯೆಯಾಗಿ ಪರಿಣಮಿಸಿದೆ ”ಎಂದು ಡಾ ಗುಲೇರಿಯಾ ಹೇಳಿದರು.

“ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ ಇದು ಶ್ವಾಸಕೋಶದ ಕಾಯಿಲೆಯಾಗಿದೆ ”ಎಂದು ಡಾ ಗುಲೇರಿಯಾ ಹೇಳಿದರು. “ಆದರೆ ಇದು ಗಮನಾರ್ಹವಾದ ನಾಳಗಳ ಸಮಸ್ಯೆಗಳನ್ನು ಹೊಂದಿದೆ. ಇದನ್ನು ಸ್ವಲ್ಪ ಮಟ್ಟಿಗೆ ನಾಳಗಳ ಕಾಯಿಲೆ ಎಂದು ಕರೆಯಬಹುದು. ಇದು ಇಡೀ ದೇಹವನ್ನು ಒಳಗೊಂಡಿರುವುದರಿಂದ ಇದನ್ನು ಗಂಭೀರ ಕಾಯಿಲೆಯಾಗಿ ಪರಿಣಮಿಸಿದೆ. ” ಎಂದಿದ್ದಾರೆ.

ಕೊರೊನಾ ವೈರಸ್ ನಿಂದ ಮೆದುಳಿಗೆ ಹಾನಿಯಾಗಬಹುದೇ?

ತೀವ್ರ ರೋಗಲಕ್ಷಣಗಳೊಂದಿಗೆ ಚೇತರಿಸಿಕೊಂಡ ರೋಗಿಗಳಲ್ಲಿ ತೊಡಕುಗಳು ಮುಂದುವರಿಯುತ್ತವೆ. “ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಶ್ವಾಸಕೋಶವು ಸಂಪೂರ್ಣವಾಗಿ ಹಾನಿಯಾಗುತ್ತದೆ (ಚೇತರಿಸಿಕೊಂಡ ರೋಗಿಗಳಲ್ಲಿ); ಅವರಲ್ಲಿ ಕೆಲವರಿಗೆ ಚೇತರಿಕೆಯ ನಂತರ ಮನೆಯಲ್ಲಿ ಆಮ್ಲಜನಕದ ಅಗತ್ಯವಿರುತ್ತದೆ. ಮೂರು ತಿಂಗಳ ಕೆಳಗೆ (ಲೈನ್), ಸಿ.ಟಿ ಸ್ಕ್ಯಾನ್‌ಗಳು ಶ್ವಾಸಕೋಶವು ಕೆಟ್ಟ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಕೆಲವು ರೋಗಿಗಳು ದೌರ್ಬಲ್ಯದ ಬಗ್ಗೆ ದೂರು ನೀಡಿದ್ದಾರೆ ಮತ್ತು ಕೆಲಸಕ್ಕೆ ಹಿಂತಿರುಗುವ ಶಕ್ತಿ ಇಲ್ಲ. ಕೆಲವು ಸಂದರ್ಭಗಳಲ್ಲಿ, ಗಂಭೀರವಾದ ಸಂಬಂಧಿ ಸಮಸ್ಯೆಗಳಿವೆ (ಚೇತರಿಕೆಯ ನಂತರ) ”ಎಂದು ಡಾ ಗುಲೇರಿಯಾ ಅವರು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ರೋಗನಿರೋಧಕಗಳು ಶಾಶ್ವತವೇ ಎಂದು ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿದ್ದರೆ.

ದತ್ತಾಂಶ ಹೇಳುವಂತೆ, ನಾವು ದೇಹದ ರೋಗನಿರೋಧಕ ಶಕ್ತಿಯ ಬಗ್ಗೆ ಕಲಿಯುತ್ತಿದ್ದೇವೆ; ಕೋಶ-ಮಧ್ಯಸ್ಥಿಕೆಯ ಪ್ರತಿರಕ್ಷೆಯನ್ನು ಸಹ ಸಕ್ರಿಯಗೊಳಿಸಲಾಗಿದೆ ಮತ್ತು ರಕ್ತದಲ್ಲಿನ  T-cells ಮೂಲಕ ರಕ್ಷಣೆ ನೀಡುತ್ತದೆ ಎಂದು ನಾವು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ಯೋಚಿಸುತ್ತಿರುವುದಕ್ಕಿಂತ ಹೆಚ್ಚಾಗಿ ನಮ್ಮನ್ನು ರಕ್ಷಿಸಬಹುದು. ಆದರೆ ರಕ್ಷಣೆ ಎಷ್ಟು ಕಾಲ ಉಳಿಯುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...