Homeಮುಖಪುಟಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

- Advertisement -
- Advertisement -

ಯುದ್ಧ ಭೂಮಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತಿರುವ UN ಸಂಸ್ಥೆ ಸಂದಿಗ್ಧತೆಯನ್ನು ಎದುರಿಸುತ್ತಿದೆ. 150 UNRWA ಕೇಂದ್ರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. 390ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1,300 ಮಂದಿ ಗಾಯಗೊಂಡಿದ್ದಾರೆ ಎಂದು  UNRWA ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ಈ ಮಧ್ಯೆ ಇಸ್ರೇಲ್‌ ಗಾಝಾದ ನಿರ್ಮೂಲನೆಗೆ ಕರೆ ನೀಡಿದ್ದು, ಹಣಕಾಸಿನ ಸ್ಥಗಿತವು UN ಸಂಸ್ಥೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇಸ್ರೇಲ್‌ ಯುದ್ಧ ಘೋಷಿಸಿದ ಅ.7ರ ಬಳಿಕ ಗಾಝಾದಲ್ಲಿ ಕೇವಲ ನಾಲ್ಕು ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಯುಎನ್ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಎಂದು ಯುಎನ್‌ ಏಜೆನ್ಸಿಯ ಫಿಲಿಪ್ ಲಝಾರಿನಿ ಹೇಳಿದ್ದಾರೆ.

UN ಜನರಲ್ ಅಸೆಂಬ್ಲಿಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರಿಗೆ ಬರೆದ ಪತ್ರದಲ್ಲಿ ಫಿಲಿಪ್ ಲಝಾರಿನಿ ಈ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಈ ಕುರಿತು ಪತ್ರವನ್ನು ಲಝಾರಿನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭೀಕರ ಅಕ್ಟೋಬರ್ 7ರ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿ ವಿರುದ್ಧ ಜನವರಿಯಲ್ಲಿ ಇಸ್ರೇಲ್  ಮಾಡಿದ ಆರೋಪಗಳನ್ನು ತಳ್ಳಿಹಾಕಿದ UNRWA ಮುಖ್ಯಸ್ಥರು ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಪುರಾವೆಗಳನ್ನು ಇಸ್ರೇಲ್ UNRWAಯೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದೆ. ಈ ಆರೋಪಗಳ ಬಳಿಕ 16  ರಾಷ್ಟ್ರಗಳು ಒಟ್ಟು 450 ಮಿಲಿಯನ್ ನೆರವನ್ನು ಸ್ಥಗಿತಗೊಳಿಸಿದೆ, ಹೆಚ್ಚಿನ ಹಣಕಾಸಿನ ಸಹಾಯವಿಲ್ಲದೆ ಮಧ್ಯಪ್ರಾಚ್ಯದಾದ್ಯಂತ UNRWA ಕಾರ್ಯಾಚರಣೆಗಳು ಮಾರ್ಚ್‌ನಿಂದ ತೀವ್ರವಾಗಿ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿನ ವಾರಗಳಲ್ಲಿ ಯುಎನ್‌ಆರ್‌ಡಬ್ಲ್ಯೂಎ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಮತ್ತು ಏಜೆನ್ಸಿಯನ್ನು ಕಿತ್ತುಹಾಕಲು ಕರೆ ನೀಡಲು ಕೆಲವು ಇಸ್ರೇಲ್‌ ಅಧಿಕಾರಿಗಳು ಸಂಘಟಿತ ಪ್ರಯತ್ನವನ್ನು ಮಾಡಿದ್ದಾರೆ ಎಂದು ಲಾಝರಿನಿ ಒತ್ತಿಹೇಳಿದ್ದಾರೆ. ನಾವು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಮಾನವ ಹಕ್ಕುಗಳ ಗಂಭೀರ ಪರಿಣಾಮಗಳೊಂದಿಗೆ ದುರಂತದ ಅಂಚಿನಲ್ಲಿದ್ದೇವೆ ಎಂದು ನಾನು ಭಯಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್‌ನ ಭದ್ರತೆಗೆ ಯುಎನ್‌ಆರ್‌ಡಬ್ಲ್ಯುಎ ಅತ್ಯಗತ್ಯ  ಎಂದು ಲಜ್ಜರಿನಿ ಗಮನ ಸೆಳೆದಿದ್ದು,ಯುದ್ಧ ಪೀಡಿತ ಪ್ರದೇಶದಲ್ಲಿ ಪ್ರಾಣವನ್ನು ರಕ್ಷಿಸುವ ಮಾನವೀಯ ಸೇವೆಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂಬ ಇಸ್ರೇಲ್‌ ಆರೋಪಗಳ ಹಿನ್ನೆಲೆ ಯುಎನ್ ಸೆಕ್ರೆಟರಿ ಜನರಲ್ ಫೆಬ್ರವರಿ ಆರಂಭದಲ್ಲಿ ಈ ಬಗ್ಗೆ ಪರಿಶೀಲನೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಮಾಜಿ ಫ್ರೆಂಚ್ ಸಚಿವ ಕ್ಯಾಥರೀನ್ ಕೊಲೊನ್ನಾ ನೇತೃತ್ವದ ಸಮಿತಿ ಪ್ಯಾಲೆಸ್ತೀನ್‌ ಅಧಿಕಾರಿಗಳನ್ನು ಭೇಟಿ ಮಾಡುವ ಗುರಿಯನ್ನು ಹೊಂದಿದೆ.  ಸಾಕ್ಷ್ಯಾಧಾರಿತ ವರದಿಯನ್ನು ನೀಡುವುದು ನನ್ನ ಗುರಿಯಾಗಿದೆ ಎಂದು ಕೊಲೊನ್ನಾ ಈಗಾಗಲೇ ಮಾದ್ಯಮಗಳಿಗೆ ತಿಳಿಸಿದ್ದಾರೆ. ಫೆಬ್ರವರಿ 13ರಂದು ಸಮಿತಿಯು ಪರಿಶೀಲನೆ ಪ್ರಾರಂಭಿಸಿದ್ದು, ಏಪ್ರಿಲ್ 20 ರಂದು ವರದಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಯುಎನ್ ನ್ಯೂಸ್ ಪ್ರಕಾರ, 1949ರಿಂದ ಕಾರ್ಯನಿರ್ವಹಿಸುತ್ತಿರುವ UNRWA ವೆಸ್ಟ್ ಬ್ಯಾಂಕ್, ಲೆಬನಾನ್, ಜೋರ್ಡಾನ್, ಸಿರಿಯಾ ಮತ್ತು ಗಾಝಾದಲ್ಲಿ ಸುಮಾರು ಆರು ಮಿಲಿಯನ್ ಪ್ಯಾಲೆಸ್ತೀನ್‌ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತದೆ. ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ 29,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ  ಹೆಚ್ಚಾಗಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...