Homeಮುಖಪುಟಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

- Advertisement -
- Advertisement -

ಯುದ್ಧ ಭೂಮಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತಿರುವ UN ಸಂಸ್ಥೆ ಸಂದಿಗ್ಧತೆಯನ್ನು ಎದುರಿಸುತ್ತಿದೆ. 150 UNRWA ಕೇಂದ್ರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. 390ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1,300 ಮಂದಿ ಗಾಯಗೊಂಡಿದ್ದಾರೆ ಎಂದು  UNRWA ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ಈ ಮಧ್ಯೆ ಇಸ್ರೇಲ್‌ ಗಾಝಾದ ನಿರ್ಮೂಲನೆಗೆ ಕರೆ ನೀಡಿದ್ದು, ಹಣಕಾಸಿನ ಸ್ಥಗಿತವು UN ಸಂಸ್ಥೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇಸ್ರೇಲ್‌ ಯುದ್ಧ ಘೋಷಿಸಿದ ಅ.7ರ ಬಳಿಕ ಗಾಝಾದಲ್ಲಿ ಕೇವಲ ನಾಲ್ಕು ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಯುಎನ್ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಎಂದು ಯುಎನ್‌ ಏಜೆನ್ಸಿಯ ಫಿಲಿಪ್ ಲಝಾರಿನಿ ಹೇಳಿದ್ದಾರೆ.

UN ಜನರಲ್ ಅಸೆಂಬ್ಲಿಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರಿಗೆ ಬರೆದ ಪತ್ರದಲ್ಲಿ ಫಿಲಿಪ್ ಲಝಾರಿನಿ ಈ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಈ ಕುರಿತು ಪತ್ರವನ್ನು ಲಝಾರಿನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭೀಕರ ಅಕ್ಟೋಬರ್ 7ರ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿ ವಿರುದ್ಧ ಜನವರಿಯಲ್ಲಿ ಇಸ್ರೇಲ್  ಮಾಡಿದ ಆರೋಪಗಳನ್ನು ತಳ್ಳಿಹಾಕಿದ UNRWA ಮುಖ್ಯಸ್ಥರು ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಪುರಾವೆಗಳನ್ನು ಇಸ್ರೇಲ್ UNRWAಯೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದೆ. ಈ ಆರೋಪಗಳ ಬಳಿಕ 16  ರಾಷ್ಟ್ರಗಳು ಒಟ್ಟು 450 ಮಿಲಿಯನ್ ನೆರವನ್ನು ಸ್ಥಗಿತಗೊಳಿಸಿದೆ, ಹೆಚ್ಚಿನ ಹಣಕಾಸಿನ ಸಹಾಯವಿಲ್ಲದೆ ಮಧ್ಯಪ್ರಾಚ್ಯದಾದ್ಯಂತ UNRWA ಕಾರ್ಯಾಚರಣೆಗಳು ಮಾರ್ಚ್‌ನಿಂದ ತೀವ್ರವಾಗಿ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿನ ವಾರಗಳಲ್ಲಿ ಯುಎನ್‌ಆರ್‌ಡಬ್ಲ್ಯೂಎ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಮತ್ತು ಏಜೆನ್ಸಿಯನ್ನು ಕಿತ್ತುಹಾಕಲು ಕರೆ ನೀಡಲು ಕೆಲವು ಇಸ್ರೇಲ್‌ ಅಧಿಕಾರಿಗಳು ಸಂಘಟಿತ ಪ್ರಯತ್ನವನ್ನು ಮಾಡಿದ್ದಾರೆ ಎಂದು ಲಾಝರಿನಿ ಒತ್ತಿಹೇಳಿದ್ದಾರೆ. ನಾವು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಮಾನವ ಹಕ್ಕುಗಳ ಗಂಭೀರ ಪರಿಣಾಮಗಳೊಂದಿಗೆ ದುರಂತದ ಅಂಚಿನಲ್ಲಿದ್ದೇವೆ ಎಂದು ನಾನು ಭಯಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್‌ನ ಭದ್ರತೆಗೆ ಯುಎನ್‌ಆರ್‌ಡಬ್ಲ್ಯುಎ ಅತ್ಯಗತ್ಯ  ಎಂದು ಲಜ್ಜರಿನಿ ಗಮನ ಸೆಳೆದಿದ್ದು,ಯುದ್ಧ ಪೀಡಿತ ಪ್ರದೇಶದಲ್ಲಿ ಪ್ರಾಣವನ್ನು ರಕ್ಷಿಸುವ ಮಾನವೀಯ ಸೇವೆಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂಬ ಇಸ್ರೇಲ್‌ ಆರೋಪಗಳ ಹಿನ್ನೆಲೆ ಯುಎನ್ ಸೆಕ್ರೆಟರಿ ಜನರಲ್ ಫೆಬ್ರವರಿ ಆರಂಭದಲ್ಲಿ ಈ ಬಗ್ಗೆ ಪರಿಶೀಲನೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಮಾಜಿ ಫ್ರೆಂಚ್ ಸಚಿವ ಕ್ಯಾಥರೀನ್ ಕೊಲೊನ್ನಾ ನೇತೃತ್ವದ ಸಮಿತಿ ಪ್ಯಾಲೆಸ್ತೀನ್‌ ಅಧಿಕಾರಿಗಳನ್ನು ಭೇಟಿ ಮಾಡುವ ಗುರಿಯನ್ನು ಹೊಂದಿದೆ.  ಸಾಕ್ಷ್ಯಾಧಾರಿತ ವರದಿಯನ್ನು ನೀಡುವುದು ನನ್ನ ಗುರಿಯಾಗಿದೆ ಎಂದು ಕೊಲೊನ್ನಾ ಈಗಾಗಲೇ ಮಾದ್ಯಮಗಳಿಗೆ ತಿಳಿಸಿದ್ದಾರೆ. ಫೆಬ್ರವರಿ 13ರಂದು ಸಮಿತಿಯು ಪರಿಶೀಲನೆ ಪ್ರಾರಂಭಿಸಿದ್ದು, ಏಪ್ರಿಲ್ 20 ರಂದು ವರದಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಯುಎನ್ ನ್ಯೂಸ್ ಪ್ರಕಾರ, 1949ರಿಂದ ಕಾರ್ಯನಿರ್ವಹಿಸುತ್ತಿರುವ UNRWA ವೆಸ್ಟ್ ಬ್ಯಾಂಕ್, ಲೆಬನಾನ್, ಜೋರ್ಡಾನ್, ಸಿರಿಯಾ ಮತ್ತು ಗಾಝಾದಲ್ಲಿ ಸುಮಾರು ಆರು ಮಿಲಿಯನ್ ಪ್ಯಾಲೆಸ್ತೀನ್‌ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತದೆ. ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ 29,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ  ಹೆಚ್ಚಾಗಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...