Homeಮುಖಪುಟಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

- Advertisement -
- Advertisement -

ಯುದ್ಧ ಭೂಮಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತಿರುವ UN ಸಂಸ್ಥೆ ಸಂದಿಗ್ಧತೆಯನ್ನು ಎದುರಿಸುತ್ತಿದೆ. 150 UNRWA ಕೇಂದ್ರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. 390ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1,300 ಮಂದಿ ಗಾಯಗೊಂಡಿದ್ದಾರೆ ಎಂದು  UNRWA ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ಈ ಮಧ್ಯೆ ಇಸ್ರೇಲ್‌ ಗಾಝಾದ ನಿರ್ಮೂಲನೆಗೆ ಕರೆ ನೀಡಿದ್ದು, ಹಣಕಾಸಿನ ಸ್ಥಗಿತವು UN ಸಂಸ್ಥೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇಸ್ರೇಲ್‌ ಯುದ್ಧ ಘೋಷಿಸಿದ ಅ.7ರ ಬಳಿಕ ಗಾಝಾದಲ್ಲಿ ಕೇವಲ ನಾಲ್ಕು ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಯುಎನ್ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಎಂದು ಯುಎನ್‌ ಏಜೆನ್ಸಿಯ ಫಿಲಿಪ್ ಲಝಾರಿನಿ ಹೇಳಿದ್ದಾರೆ.

UN ಜನರಲ್ ಅಸೆಂಬ್ಲಿಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರಿಗೆ ಬರೆದ ಪತ್ರದಲ್ಲಿ ಫಿಲಿಪ್ ಲಝಾರಿನಿ ಈ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಈ ಕುರಿತು ಪತ್ರವನ್ನು ಲಝಾರಿನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭೀಕರ ಅಕ್ಟೋಬರ್ 7ರ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿ ವಿರುದ್ಧ ಜನವರಿಯಲ್ಲಿ ಇಸ್ರೇಲ್  ಮಾಡಿದ ಆರೋಪಗಳನ್ನು ತಳ್ಳಿಹಾಕಿದ UNRWA ಮುಖ್ಯಸ್ಥರು ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಪುರಾವೆಗಳನ್ನು ಇಸ್ರೇಲ್ UNRWAಯೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದೆ. ಈ ಆರೋಪಗಳ ಬಳಿಕ 16  ರಾಷ್ಟ್ರಗಳು ಒಟ್ಟು 450 ಮಿಲಿಯನ್ ನೆರವನ್ನು ಸ್ಥಗಿತಗೊಳಿಸಿದೆ, ಹೆಚ್ಚಿನ ಹಣಕಾಸಿನ ಸಹಾಯವಿಲ್ಲದೆ ಮಧ್ಯಪ್ರಾಚ್ಯದಾದ್ಯಂತ UNRWA ಕಾರ್ಯಾಚರಣೆಗಳು ಮಾರ್ಚ್‌ನಿಂದ ತೀವ್ರವಾಗಿ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿನ ವಾರಗಳಲ್ಲಿ ಯುಎನ್‌ಆರ್‌ಡಬ್ಲ್ಯೂಎ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಮತ್ತು ಏಜೆನ್ಸಿಯನ್ನು ಕಿತ್ತುಹಾಕಲು ಕರೆ ನೀಡಲು ಕೆಲವು ಇಸ್ರೇಲ್‌ ಅಧಿಕಾರಿಗಳು ಸಂಘಟಿತ ಪ್ರಯತ್ನವನ್ನು ಮಾಡಿದ್ದಾರೆ ಎಂದು ಲಾಝರಿನಿ ಒತ್ತಿಹೇಳಿದ್ದಾರೆ. ನಾವು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಮಾನವ ಹಕ್ಕುಗಳ ಗಂಭೀರ ಪರಿಣಾಮಗಳೊಂದಿಗೆ ದುರಂತದ ಅಂಚಿನಲ್ಲಿದ್ದೇವೆ ಎಂದು ನಾನು ಭಯಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್‌ನ ಭದ್ರತೆಗೆ ಯುಎನ್‌ಆರ್‌ಡಬ್ಲ್ಯುಎ ಅತ್ಯಗತ್ಯ  ಎಂದು ಲಜ್ಜರಿನಿ ಗಮನ ಸೆಳೆದಿದ್ದು,ಯುದ್ಧ ಪೀಡಿತ ಪ್ರದೇಶದಲ್ಲಿ ಪ್ರಾಣವನ್ನು ರಕ್ಷಿಸುವ ಮಾನವೀಯ ಸೇವೆಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂಬ ಇಸ್ರೇಲ್‌ ಆರೋಪಗಳ ಹಿನ್ನೆಲೆ ಯುಎನ್ ಸೆಕ್ರೆಟರಿ ಜನರಲ್ ಫೆಬ್ರವರಿ ಆರಂಭದಲ್ಲಿ ಈ ಬಗ್ಗೆ ಪರಿಶೀಲನೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಮಾಜಿ ಫ್ರೆಂಚ್ ಸಚಿವ ಕ್ಯಾಥರೀನ್ ಕೊಲೊನ್ನಾ ನೇತೃತ್ವದ ಸಮಿತಿ ಪ್ಯಾಲೆಸ್ತೀನ್‌ ಅಧಿಕಾರಿಗಳನ್ನು ಭೇಟಿ ಮಾಡುವ ಗುರಿಯನ್ನು ಹೊಂದಿದೆ.  ಸಾಕ್ಷ್ಯಾಧಾರಿತ ವರದಿಯನ್ನು ನೀಡುವುದು ನನ್ನ ಗುರಿಯಾಗಿದೆ ಎಂದು ಕೊಲೊನ್ನಾ ಈಗಾಗಲೇ ಮಾದ್ಯಮಗಳಿಗೆ ತಿಳಿಸಿದ್ದಾರೆ. ಫೆಬ್ರವರಿ 13ರಂದು ಸಮಿತಿಯು ಪರಿಶೀಲನೆ ಪ್ರಾರಂಭಿಸಿದ್ದು, ಏಪ್ರಿಲ್ 20 ರಂದು ವರದಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಯುಎನ್ ನ್ಯೂಸ್ ಪ್ರಕಾರ, 1949ರಿಂದ ಕಾರ್ಯನಿರ್ವಹಿಸುತ್ತಿರುವ UNRWA ವೆಸ್ಟ್ ಬ್ಯಾಂಕ್, ಲೆಬನಾನ್, ಜೋರ್ಡಾನ್, ಸಿರಿಯಾ ಮತ್ತು ಗಾಝಾದಲ್ಲಿ ಸುಮಾರು ಆರು ಮಿಲಿಯನ್ ಪ್ಯಾಲೆಸ್ತೀನ್‌ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತದೆ. ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ 29,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ  ಹೆಚ್ಚಾಗಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...