Homeಮುಖಪುಟಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

- Advertisement -
- Advertisement -

ಯುದ್ಧ ಭೂಮಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತಿರುವ UN ಸಂಸ್ಥೆ ಸಂದಿಗ್ಧತೆಯನ್ನು ಎದುರಿಸುತ್ತಿದೆ. 150 UNRWA ಕೇಂದ್ರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. 390ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1,300 ಮಂದಿ ಗಾಯಗೊಂಡಿದ್ದಾರೆ ಎಂದು  UNRWA ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ಈ ಮಧ್ಯೆ ಇಸ್ರೇಲ್‌ ಗಾಝಾದ ನಿರ್ಮೂಲನೆಗೆ ಕರೆ ನೀಡಿದ್ದು, ಹಣಕಾಸಿನ ಸ್ಥಗಿತವು UN ಸಂಸ್ಥೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇಸ್ರೇಲ್‌ ಯುದ್ಧ ಘೋಷಿಸಿದ ಅ.7ರ ಬಳಿಕ ಗಾಝಾದಲ್ಲಿ ಕೇವಲ ನಾಲ್ಕು ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಯುಎನ್ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಎಂದು ಯುಎನ್‌ ಏಜೆನ್ಸಿಯ ಫಿಲಿಪ್ ಲಝಾರಿನಿ ಹೇಳಿದ್ದಾರೆ.

UN ಜನರಲ್ ಅಸೆಂಬ್ಲಿಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರಿಗೆ ಬರೆದ ಪತ್ರದಲ್ಲಿ ಫಿಲಿಪ್ ಲಝಾರಿನಿ ಈ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಈ ಕುರಿತು ಪತ್ರವನ್ನು ಲಝಾರಿನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭೀಕರ ಅಕ್ಟೋಬರ್ 7ರ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿ ವಿರುದ್ಧ ಜನವರಿಯಲ್ಲಿ ಇಸ್ರೇಲ್  ಮಾಡಿದ ಆರೋಪಗಳನ್ನು ತಳ್ಳಿಹಾಕಿದ UNRWA ಮುಖ್ಯಸ್ಥರು ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಪುರಾವೆಗಳನ್ನು ಇಸ್ರೇಲ್ UNRWAಯೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದೆ. ಈ ಆರೋಪಗಳ ಬಳಿಕ 16  ರಾಷ್ಟ್ರಗಳು ಒಟ್ಟು 450 ಮಿಲಿಯನ್ ನೆರವನ್ನು ಸ್ಥಗಿತಗೊಳಿಸಿದೆ, ಹೆಚ್ಚಿನ ಹಣಕಾಸಿನ ಸಹಾಯವಿಲ್ಲದೆ ಮಧ್ಯಪ್ರಾಚ್ಯದಾದ್ಯಂತ UNRWA ಕಾರ್ಯಾಚರಣೆಗಳು ಮಾರ್ಚ್‌ನಿಂದ ತೀವ್ರವಾಗಿ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿನ ವಾರಗಳಲ್ಲಿ ಯುಎನ್‌ಆರ್‌ಡಬ್ಲ್ಯೂಎ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಮತ್ತು ಏಜೆನ್ಸಿಯನ್ನು ಕಿತ್ತುಹಾಕಲು ಕರೆ ನೀಡಲು ಕೆಲವು ಇಸ್ರೇಲ್‌ ಅಧಿಕಾರಿಗಳು ಸಂಘಟಿತ ಪ್ರಯತ್ನವನ್ನು ಮಾಡಿದ್ದಾರೆ ಎಂದು ಲಾಝರಿನಿ ಒತ್ತಿಹೇಳಿದ್ದಾರೆ. ನಾವು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಮಾನವ ಹಕ್ಕುಗಳ ಗಂಭೀರ ಪರಿಣಾಮಗಳೊಂದಿಗೆ ದುರಂತದ ಅಂಚಿನಲ್ಲಿದ್ದೇವೆ ಎಂದು ನಾನು ಭಯಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್‌ನ ಭದ್ರತೆಗೆ ಯುಎನ್‌ಆರ್‌ಡಬ್ಲ್ಯುಎ ಅತ್ಯಗತ್ಯ  ಎಂದು ಲಜ್ಜರಿನಿ ಗಮನ ಸೆಳೆದಿದ್ದು,ಯುದ್ಧ ಪೀಡಿತ ಪ್ರದೇಶದಲ್ಲಿ ಪ್ರಾಣವನ್ನು ರಕ್ಷಿಸುವ ಮಾನವೀಯ ಸೇವೆಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂಬ ಇಸ್ರೇಲ್‌ ಆರೋಪಗಳ ಹಿನ್ನೆಲೆ ಯುಎನ್ ಸೆಕ್ರೆಟರಿ ಜನರಲ್ ಫೆಬ್ರವರಿ ಆರಂಭದಲ್ಲಿ ಈ ಬಗ್ಗೆ ಪರಿಶೀಲನೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಮಾಜಿ ಫ್ರೆಂಚ್ ಸಚಿವ ಕ್ಯಾಥರೀನ್ ಕೊಲೊನ್ನಾ ನೇತೃತ್ವದ ಸಮಿತಿ ಪ್ಯಾಲೆಸ್ತೀನ್‌ ಅಧಿಕಾರಿಗಳನ್ನು ಭೇಟಿ ಮಾಡುವ ಗುರಿಯನ್ನು ಹೊಂದಿದೆ.  ಸಾಕ್ಷ್ಯಾಧಾರಿತ ವರದಿಯನ್ನು ನೀಡುವುದು ನನ್ನ ಗುರಿಯಾಗಿದೆ ಎಂದು ಕೊಲೊನ್ನಾ ಈಗಾಗಲೇ ಮಾದ್ಯಮಗಳಿಗೆ ತಿಳಿಸಿದ್ದಾರೆ. ಫೆಬ್ರವರಿ 13ರಂದು ಸಮಿತಿಯು ಪರಿಶೀಲನೆ ಪ್ರಾರಂಭಿಸಿದ್ದು, ಏಪ್ರಿಲ್ 20 ರಂದು ವರದಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಯುಎನ್ ನ್ಯೂಸ್ ಪ್ರಕಾರ, 1949ರಿಂದ ಕಾರ್ಯನಿರ್ವಹಿಸುತ್ತಿರುವ UNRWA ವೆಸ್ಟ್ ಬ್ಯಾಂಕ್, ಲೆಬನಾನ್, ಜೋರ್ಡಾನ್, ಸಿರಿಯಾ ಮತ್ತು ಗಾಝಾದಲ್ಲಿ ಸುಮಾರು ಆರು ಮಿಲಿಯನ್ ಪ್ಯಾಲೆಸ್ತೀನ್‌ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತದೆ. ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ 29,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ  ಹೆಚ್ಚಾಗಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...