Homeಮುಖಪುಟಸಿಖ್ಖರ ವಿರುದ್ಧ ಕ್ಯಾಬಿನೆಟ್ ಸಮಿತಿ ಚರ್ಚಿಸುತ್ತಿದೆ ಎಂದು ಬಿಂಬಿಸಿ ನಕಲಿ ವಿಡಿಯೊ ವೈರಲ್‌; FIR ದಾಖಲು

ಸಿಖ್ಖರ ವಿರುದ್ಧ ಕ್ಯಾಬಿನೆಟ್ ಸಮಿತಿ ಚರ್ಚಿಸುತ್ತಿದೆ ಎಂದು ಬಿಂಬಿಸಿ ನಕಲಿ ವಿಡಿಯೊ ವೈರಲ್‌; FIR ದಾಖಲು

- Advertisement -
- Advertisement -

ಸಿಖ್‌‌‌‌ ಸಮುದಾಯದ ವಿರುದ್ಧ ಸಭೆ ನಡೆಯುತ್ತಿದೆ ಎಂದು ಬಿಂಬಿಸಿ ಕ್ಯಾಬಿನೆಟ್‌ ಸಮಿತಿಯ ನಕಲಿ ವೀಡಿಯೊ ಹರಿದಾಡುತ್ತಿದ್ದು, ಇದರ ವಿರುದ್ದ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆಯ ಸಮಯದಲ್ಲಿ, ಕೆಲವು ಟ್ವಿಟರ್ ಹ್ಯಾಂಡಲ್‌ಗಳು ನಕಲಿ ಅಥವಾ ಮಾರ್ಫ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾಸ್ತವದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು, CDS ಬಿಪಿನ್ ರಾವತ್ ಅವರ ನಿಧನದ ನಂತರ ಡಿಸೆಂಬರ್ 9, 2021 ರಂದು ನಡೆದ ಕ್ಯಾಬಿನೆಟ್ ಸಮಿತಿಯ ಸಭೆಯ ವೀಡಿಯೊವಾಗಿದೆ. ಈ ವಿಡಿಯೊ ವಿವಿಧ ಸುದ್ದಿ ಪೋರ್ಟಲ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಬುಲ್ಲಿ ಬಾಯ್‌‌ ವಿಕೃತಿಯ ಬಳಿಕ ‘ಟ್ರೇಡ್‌’ ‘ರಾಯ್ತಾಸ್‌’ ಗುಂಪುಗಳ ನಡುವಿನ ಬಲಪಂಥೀಯ ಭಿನ್ನತೆ ಬಯಲು

“ದ್ವೇಷವನ್ನು ಉತ್ತೇಜಿಸುವ ಮತ್ತು ಕೋಮು ಸೌಹಾರ್ದತೆಯನ್ನು ಪ್ರಚೋದಿಸುವ ದುರುದ್ದೇಶದಿಂದ, ವೀಡಿಯೊವನ್ನು ಮಾರ್ಫ್ ಮಾಡಲಾಗಿದೆ. ಜೊತೆಗೆ ಅದಕ್ಕೆ ಹೊಸ ವಾಯ್ಸ್‌ಓವರ್‌ ನೀಡಲಾಗಿದ್ದು, ಸಭೆಯು ಸಿಖ್ ಸಮುದಾಯದ ವಿರುದ್ಧವಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (IFSO) ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.

“ಭದ್ರತಾ ಕುರಿತ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ಭಾರತೀಯ ಸೇನೆಯಿಂದ ಸಿಖ್ಖರನ್ನು ತೆಗೆದುಹಾಕಲು ಕರೆ ನೀಡಲಾಗಿದೆ ಎಂಬ ವೈರಲ್ ವೀಡಿಯೊ ಹೇಳಿಕೆಯನ್ನು ಉಲ್ಲೇಖಿಸುವ ಟ್ವೀಟ್‌ನ ಪ್ರತಿಪಾದನೆ ನಕಲಿಯಾಗಿದೆ. ಅಂತಹ ಯಾವುದೇ ಚರ್ಚೆ ಹಾಗೂ ಸಭೆ ನಡೆದಿಲ್ಲ” PIB ಫ್ಯಾಕ್ಟ್ ಚೆಕ್ ಟ್ವೀಟ್ ಮಾಡಿದೆ.

ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಇಂತಹ ಕೃತ್ಯವು ಸೌಹಾರ್ದತೆ ಹಾಳು ಮಾಡುತ್ತದೆ ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗ ತರುತ್ತದೆ. ಈ ಕೃತ್ಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಅಡಿಯಲ್ಲಿ ಅಪರಾಧವಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಈ ವೀಡಿಯೊದ ಪ್ರಚಾರವನ್ನು ಪ್ರಾರಂಭಿಸಿದ ಟ್ವಿಟರ್ ಖಾತೆಗಳು @simrankaur0507 ಮತ್ತು @eshalkaur1 ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

“ಇಂತಹ ವೀಡಿಯೊಗಳನ್ನು ನಂಬಬೇಡಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೊದಲು ಸರಿಯಾದ ಸತ್ಯಾಸತ್ಯತೆಯನ್ನು ಪರಿಶೀಲಿಸಿ” ದೆಹಲಿ ಪೊಲೀಸರು ಸಾರ್ವಜನಿಕರಿಗೆ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಈ ವಿಡಿಯೊಗೆ ನೀಡಲಾಗಿರುವ ವಾಯ್ಸ್‌‌‌‌‌‌‌‌‌‌ ಒವರ್‌‌‌‌‌‌‌ ಕ್ಲಬ್ ಹೌಸ್‌‌ನಲ್ಲಿ ಮಾಡಿರುವ ಒಂದು ಚರ್ಚೆಯಾಗಿದೆ. ಈ ಚರ್ಚೆಯನ್ನು ಏರ್ಪಡಿಸಿದ್ದು, ಬಿಜೆಪಿ ಪರವಾಗಿ ಪ್ರೊಪಗಾಂಡ ಚಲಾವಣೆ ಮಾಡುವ ವೆಬ್‌ಸೈಟ್‌‌ನ ಸಂಪಾದಕಿ ನುಪುರ್‌ ಜೆ ಶರ್ಮಾ ಅವರಾಗಿದ್ದಾರೆ. ಈ ಚರ್ಚೆಯಲ್ಲಿ ಮಾತನಾಡಿದ್ದ ವ್ಯಕ್ತಿಯೊಬ್ಬ, ಸೇನೆಯಲ್ಲಿರುವ ಪ್ರತಿಯೊಬ್ಬ ಸಿಖ್ಖರನ್ನೂ ತೆಗೆದುಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನು.

ಇದನ್ನೂ ಓದಿ:ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...