Homeಮುಖಪುಟಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ

- Advertisement -
- Advertisement -

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ನಿನ್ನೆ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ನಿನ್ನೆ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

ಇದನ್ನೂ ಓದಿ : ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...