Homeಮುಖಪುಟಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ

- Advertisement -
- Advertisement -

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ನಿನ್ನೆ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ನಿನ್ನೆ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

ಇದನ್ನೂ ಓದಿ : ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...