HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...