HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...