HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...