HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...