HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...