HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...