HomeಚಳವಳಿJNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

JNU ಹಲ್ಲೆ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 5 ರಂದು ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸದಸ್ಯರ ಮೇಲೆ ನಡೆದ ದಾಳಿಯ ವಿಡಿಯೋಗಳಲ್ಲಿ ಕಂಡುಬರುವ ಮುಖವಾಡ ಧರಿಸಿದ್ಧ ಹುಡುಗಿಯನ್ನು ಎಬಿವಿಪಿ ಸದಸ್ಯೆ, ದೆಹಲಿ ವಿಶ್ವವಿದ್ಯಾಲಯದ ಕೋಮಲ್ ಶರ್ಮಾ ಎಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶರ್ಮಾ ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರ್‌ಎಸ್‌ಎಸ್ ಸಂಯೋಜಿತ ಅಖಿಲ್ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಸದಸ್ಯರಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 5 ರಂದು ಹಲ್ಲೆಗೊಳಗಾದ ಅನೇಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಲ್ಲೆ ನಡೆಸಿದ ಗೂಂಡಾಗಳು ಎಬಿವಿಪಿ ಸದಸ್ಯರು ಎಂದು ಆರೋಪಿಸಿದ್ದರು.

ಅಷ್ಟು ಮಾತ್ರವಲ್ಲ ಈಗ ಪೊಲೀಸರು ಯಾವುದನ್ನು ಒಪ್ಪಿಕೊಂಡಿದ್ದಾರೆ ಅದನ್ನು ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹಲವಾರು ಕಾರ್ಯಕರ್ತರು ದಾಳಿ ನಡೆಸಿದವರು ಎಬಿವಿಪಿಯವರು ಎಂದು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದರು.

ವೈರಲ್ ಆದ ವೀಡಿಯೊಗಳಲ್ಲಿ, ಶರ್ಮಾ ಚೆಕ್ ಶರ್ಟ್ ಧರಿಸಿ, ಮುಖವನ್ನು ತಿಳಿ ನೀಲಿ ಬಣ್ಣದ ಸ್ಕಾರ್ಫ್ನಿಂದ ಮುಚ್ಚಿರುತ್ತಾಳೆ. ಸಬರಮತಿ ಹಾಸ್ಟೆಲ್ ಒಳಗೆ ಅವಳು ಕೋಲು ಹಿಡಿದುಕೊಂಡಿದ್ದಾಳೆ ಮತ್ತು ಇತರ ಇಬ್ಬರು ಪುರುಷರೊಂದಿಗೆ ವಿದ್ಯಾರ್ಥಿಗಳನ್ನು ಬೆದರಿಸುವುದನ್ನು ಕೇಳಬಹುದು. ಅಲ್ಲಿ ಅನೇಕ ವಿದ್ಯಾರ್ಥಿಗಳನ್ನು ಥಳಿಸಲಾಯಿತು ಮತ್ತು ಕೊಠಡಿಗಳನ್ನು ಧ್ವಂಸಗೊಳಿಸಲಾಯಿತು.

ಪೊಲೀಸರು ಶರ್ಮಾ ಮತ್ತು ಇತರ ಇಬ್ಬರು ಅಕ್ಷತ್ ಅವಸ್ಥಿ ಮತ್ತು ರೋಹಿತ್ ಷಾ ಅವರಿಗೆ ಐಪಿಸಿ ಸೆಕ್ಷನ್ 160(ಶಾಂತಿಗೆ ಭಂಗ ತರುವುದುಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹಲ್ಲೆ)ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಅವರ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವಸ್ಥಿ ಮತ್ತು ಷಾ ಇಂಡಿಯಾ ಟುಡೆ ಸ್ಟಿಂಗ್‌ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಅವರು ಎಬಿವಿಪಿ ಸದಸ್ಯರು ಮತ್ತು ಜನವರಿ 5 ರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದ್ದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ್ ಯಾದವ್, ಶರ್ಮಾ ತಮ್ಮ ವಿದ್ಯಾರ್ಥಿ ಸಂಘಟನೆಯ ಸದಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಅವಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ನನಗೆ ಕೊನೆಯದಾಗಿ ಬಂದ ಮಾಹಿತಿಯೆಂದರೆ ಅವಳು ತನ್ನ ಕುಟುಂಬದೊಂದಿಗೆ ಇದ್ದಾಳೆ. ಅವಳು ಪೊಲೀಸರಿಂದ ಸಮನ್ಸ್ ಪಡೆದಿದ್ದೀರಾ ಎಂದು ಕೇಳಲು ಪ್ರಯತ್ನಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಆದರೆ ಎಬಿವಿಪಿಯು ರೋಹಿತ್ ಷಾ ಅವರೊಂದಿಗೆ ನಮಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಅದೇ ರೀತಿಯಲ್ಲಿ ಅವಸ್ಥಿ ಎಬಿವಿಪಿ ಸದಸ್ಯ ಅಲ್ಲ ಎಂದು ಅದು ಮೊದಲೇ ನಿರಾಕರಿಸಿತ್ತು. ಆದರೆ ಆಲ್ಟ್ ನ್ಯೂಸ್ ನಡೆಸಿದ ತನಿಖೆಯಲ್ಲಿ ಎಬಿವಿಪಿ ಸುಳ್ಳು ಹೇಳುತ್ತಿದೆ ಮತ್ತು ಅವಸ್ಥಿ ಎಬಿವಿಪಿಯ ಸಕ್ರಿಯ ಸದಸ್ಯ ಎಂಬುದು ಸಾಬೀತಾಗಿತ್ತು.

ದೆಹಲಿ ಪೊಲೀಸರು ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ದಾಳಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳನ್ನು ಪ್ರಶ್ನಿಸಿದೆ. ಸುಚೇತಾ ತಾಲೂಕ್ದಾರ್ ಮತ್ತು ಪ್ರಿಯಾ ರಂಜನ್ ಅವರನ್ನು ತಲಾ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ ಎಂದು ಹೆಚ್ಚುವರಿ ಪಿಆರ್‌ಒ (ದೆಹಲಿ ಪೊಲೀಸ್) ಅನಿಲ್ ಮಿತ್ತಲ್ ತಿಳಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ತಾಲ್ಲೂಕ್ದಾರ್‌ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಜೆಎನ್‌ಯುಎಸ್‌ಯು ಕೌನ್ಸಿಲರ್ ಆಗಿದ್ದು, ರಂಜನ್ ಅವರ ರಾಜಕೀಯ ಸಂಬಂಧಗಳು ಸ್ಪಷ್ಟವಾಗಿಲ್ಲ.

ಎಸ್‌ಐಟಿಗೆ ಒಂದೂವರೆ ಪುಟದ ಹೇಳಿಕೆ ನೀಡಿದ್ದಾರೆ ಎಂದು ತಾಲ್ಲೂಕಾರ್ ಹೇಳಿದ್ದಾರೆ. “ಅವರು ಜನವರಿ 5 ರ ಘಟನೆಯ ಬಗ್ಗೆ ನನ್ನನ್ನು ಕೇಳಿದರು, ಆ ದಿನ ನಾನು ಎಲ್ಲಿದ್ದೆ, ಗಾಯಗೊಂಡ ವಿದ್ಯಾರ್ಥಿಗಳ ವಿವರಗಳು ಮತ್ತು ನಾನು ಬೇರೆಯವರನ್ನು ಗುರುತಿಸಬಹುದೇ” ಎಂದು ಅವರು ಹೇಳಿದರು. ತಾಲೂಕ್ದಾರ್‌ಗೆ ಫೋಟೋವೊಂದನ್ನು ತೋರಿಸಿ ನೀನೆ ಎಂದು ಕೇಳಿದಾಗ ಅವಳು ನಿರಾಕರಿಸಿದ್ದಲ್ಲದೇ, ದಾಳಿಯಲ್ಲಿ ನಾನು ಭಾಗಿಯಾಗಿಲ್ಲ ಮತ್ತು ಫೋಟೋ ತುಂಬಾ ಮಸುಕಾಗಿದೆ ಎಂದು ಹೇಳಿದ್ದಾಳೆ.

ಜನವರಿ 5 ರಂದು ತಾನು ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಒಂದು ಪುಟದ ಹೇಳಿಕೆ ನೀಡಿದ್ದೇನೆ ಎಂದು ಸ್ಕೂಲ್ ಆಫ್ ಲ್ಯಾಂಗ್ವೇಜ್, ಲಿಟರೇಚರ್ ಮತ್ತು ಕಲ್ಚರ್ ಸ್ಟಡೀಸ್‌ನ ಬಿಎ ಮೂರನೇ ವರ್ಷದ ವಿದ್ಯಾರ್ಥಿ ರಂಜನ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...