Homeಕರ್ನಾಟಕಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

- Advertisement -
- Advertisement -

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿಡಿಯೊ ವಿವಾದ ಸೃಷ್ಟಿಸಿದೆ. ಕೋಮು ಸೌಹಾರ್ದತೆ ಹಾನಿ ಮಾಡಲು ಯತ್ನಿಸಿದ ಸ್ವಾಮೀಜಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಕಾಳಿ ಸ್ವಾಮೀಜಿ ಮಸೀದಿ ಮುಂದೆ ನಿಂತು ಮಾತನಾಡುತ್ತಾ ಮಸೀದಿ ಕೆಡವಲು ಕರೆ ನೀಡಿದ್ದರು. ದೇವಾಲಯವನ್ನು ದ್ವಂಸ ಮಾಡಿ ಮಸೀದಿ ಮಾಡಿದ್ದಾರೆ. ಹೀಗಾಗಿ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕು ಎಂದು ವಿಡಿಯೊ ಮಾಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಅಷ್ಟೇ ಅಲ್ಲದೇ, “ನನ್ನ ಹೇಳಿಕೆಗೆ ಈಗಲೂ ನಾನು ಬದ್ದನಾಗಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರದಂತೆ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ‌ ಕಟ್ಟುತ್ತೇವೆ. ಮಸೀದಿ‌ ನನಗೆ ದೇವಾಲಯದ ರೀತಿ‌ ಕಾಣಿಸಿದೆ” ಎಂದು ಬಂಧನದ ಬಳಿಕ ಹೇಳಿಕೆ ನೀಡಿದ್ದರು.

ದೇವಾಲಯಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಲಾಗಿದೆ ಎಂದು ಸಂಘ ಪರಿವಾರದ ಮುಖಗಳು ಆರೋಪಿಸುವುದು ಇದೇ ಮೊದಲೇನೂ ಅಲ್ಲ. ಅಲ್ಲದೇ ಮೈಸೂರು ಸಂಸ್ಥಾನವನ್ನು ಮುಸ್ಲಿಂ ದೊರೆಗಳಾದ ‘ಹೈದರಾಲಿ’ ಮತ್ತು ‘ಟಿಪ್ಪು’ ಆಳಿದ್ದರಿಂದ ಈ ರೀತಿಯ ಆರೋಪಗಳನ್ನು ಮಾಡುವುದು ಸಾಮಾನ್ಯವಾಗಿದೆ.

ಟಿಪ್ಪು ಸುಲ್ತಾನ್‌ ಶ್ರೀರಂಗಪಟ್ಟಣವನ್ನು ರಾಜಧಾನಿಯಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ. ಅಲ್ಲದೇ ಟಿಪ್ಪು ಕೋಮು ಸೌಹಾರ್ದತೆಗೂ ಹೆಸರಾಗಿದ್ದ ಎಂಬುದನ್ನು ಇತಿಹಾಸ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಆದರೆ ಆತ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಮುಸ್ಲಿಂ ವಿರುದ್ಧ ದ್ವೇಷವನ್ನು ಹರಡುವುದು ಎಗ್ಗಿಲ್ಲದೇ ಸಾಗಿದೆ. ಟಿಪ್ಪು ಹಿಂದೂ-ಮುಸ್ಲಿಂ ಭಾವೈಕ್ಯತೆ ಹೆಸರಾಗಿದ್ದ ಎಂಬುದಕ್ಕೆ ಆತ ಹಿಂದೂ ದೇವಾಲಯಗಳಿಗೆ ಕೊಟ್ಟ ಉಂಬಳಿಗಳು, ಹಿಂದೂಗಳನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿಕೊಂಡಿದ್ದು, ಶೃಂಗೇರಿ ಮಠದ ಸ್ವಾಮೀಜಿಯೊಂದಿಗೆ ಆತ ಹೊಂದಿದ್ದ ಪ್ರೀತಿ, ವಿಶ್ವಾಸಗಳೇ ಸಾಕ್ಷಿಯಾಗಿ ನಿಂತಿವೆ. ಆದರೆ ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಆತನ ಅಧಿಕಾರವಧಿಯಲ್ಲಿ ಹಿಂದೂಗಳನ್ನು ಅಪಮಾನಿಸಲಾಗಿದೆ ಎಂದು ಬಿಂಬಿಸುತ್ತಿರುವುದನ್ನು ಕಾಣಬಹುದು. ಕಾಳಿ ಸ್ವಾಮೀಜಿ ಆರೋಪ ಇದೇ ಹಿನ್ನೆಲೆಯಲ್ಲಿ ಮೂಡಿಬಂದಿರುವುದೆಂದು ಎಂಥವರೂ ಊಹಿಸುತ್ತಾರೆ. (ಟಿಪ್ಪು ಕುರಿತು ಹರಡಲಾಗಿರುವ ಸುಳ್ಳುಗಳಿಗೆ ಸಂಬಂಧಿಸಿದಂತೆ ಹಾಗೂ ನಿಜಸಂಗತಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ಕಾಳಿ ಸ್ವಾಮೀಜಿಯಷ್ಟೇ ಅಲ್ಲ, ಹೀಗೆ ಕೋಮುದ್ವೇಷವನ್ನು ಹರಡುವ ಯತ್ನಗಳು ಮೊದಲಿನಿಂದಲೂ ಸಾಗುತ್ತಲೇ ಇವೆ. ರಾಯಚೂರಿನಲ್ಲಿ ಮಸೀದಿ ಒಡೆದಾಗ ದೇವಾಲಯ ಪತ್ತೆಯಾಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಆರೋಪಿಸಲಾಗಿತ್ತು. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದರು. “ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಇಲ್ಲಿ ಪತ್ತೆಯಾಗಿರುವ ಕಂಬವನ್ನು ಹಿಂದೂ ದೇವಾಲಯ” ಎಂದು ಜಿಲ್ಲಾಧಿಕಾರಿ ಹೇಳಿದ್ದರು.

ಕಾಳಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಆದರೆ ಇದೇ ರೀತಿ ಈ ಹಿಂದೆಯೇ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಪ್ರಕರಣ ಏನಾಯಿತು ಎಂಬ ಪ್ರಶ್ನೆ ಏಳುತ್ತದೆ.

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಅವರು ಕಳೆದ ಅಕ್ಟೋಬರ್‌ನಲ್ಲಿ ನೀಡಿದ್ದರು.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದ ವಿಡಿಯೋ ವೈರಲ್‌ ಆಗಿತ್ತು.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸಿದ್ದರು.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದರು. ಬಾಬರ್‌‌ನನ್ನು ನಿಂದಿಸಿದ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದರು. ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

ಅಭಿವೃದ್ಧಿ ಅಜೆಂಡಾ ಇಲ್ಲದಿರುವಾಗ ಕೋಮು ಭಾವನೆಗಳೇ ಅಧಿಕಾರದ ಅಸ್ತ್ರಗಳಾಗಿ ಪರಿಣಮಿಸುತ್ತಿರುವ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಯತಿ ನರಸಿಂಗಾನಂದ ಕರೆ ನೀಡಿದ್ದನ್ನು ನೋಡಿದೆವು. ಕಾಳಿಚರಣ್‌ ಎಂಬ ಸ್ವಾಮೀಜಿ ಗಾಂಧೀಜಿಯ ಕುರಿತು ಅವಹೇಳನಕಾರಿಯಾಗಿ ಮತ್ತೊಂದೆಡೆ ಮಾತನಾಡಿದ್ದರು. ಇದನ್ನೆಲ್ಲ ಪ್ರಧಾನಿ ಮೋದಿಯವರು ನೋಡುತ್ತಾ ಕುಳಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ವಿರೋಧಿಸಿ ಒಂದು ಹೇಳಿಕೆಯನ್ನೂ ಪ್ರಧಾನಿಯವರು ನೀಡಿಲ್ಲ. ಐದು ರಾಜ್ಯಗಳ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಸ್ಲಿಂ ವಿರೋಧಿ ಹೇಳಿಕೆಗಳೇ ಚುನಾವಣೆಯ ಅಸ್ತ್ರಗಳಾಗಿ ಬಳಕೆಯಾಗುತ್ತಿರುವುದು ವಿಪರ್ಯಾಸ.


ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ’ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...