Homeಕರ್ನಾಟಕಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

- Advertisement -
- Advertisement -

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿಡಿಯೊ ವಿವಾದ ಸೃಷ್ಟಿಸಿದೆ. ಕೋಮು ಸೌಹಾರ್ದತೆ ಹಾನಿ ಮಾಡಲು ಯತ್ನಿಸಿದ ಸ್ವಾಮೀಜಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಕಾಳಿ ಸ್ವಾಮೀಜಿ ಮಸೀದಿ ಮುಂದೆ ನಿಂತು ಮಾತನಾಡುತ್ತಾ ಮಸೀದಿ ಕೆಡವಲು ಕರೆ ನೀಡಿದ್ದರು. ದೇವಾಲಯವನ್ನು ದ್ವಂಸ ಮಾಡಿ ಮಸೀದಿ ಮಾಡಿದ್ದಾರೆ. ಹೀಗಾಗಿ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕು ಎಂದು ವಿಡಿಯೊ ಮಾಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಅಷ್ಟೇ ಅಲ್ಲದೇ, “ನನ್ನ ಹೇಳಿಕೆಗೆ ಈಗಲೂ ನಾನು ಬದ್ದನಾಗಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರದಂತೆ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ‌ ಕಟ್ಟುತ್ತೇವೆ. ಮಸೀದಿ‌ ನನಗೆ ದೇವಾಲಯದ ರೀತಿ‌ ಕಾಣಿಸಿದೆ” ಎಂದು ಬಂಧನದ ಬಳಿಕ ಹೇಳಿಕೆ ನೀಡಿದ್ದರು.

ದೇವಾಲಯಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಲಾಗಿದೆ ಎಂದು ಸಂಘ ಪರಿವಾರದ ಮುಖಗಳು ಆರೋಪಿಸುವುದು ಇದೇ ಮೊದಲೇನೂ ಅಲ್ಲ. ಅಲ್ಲದೇ ಮೈಸೂರು ಸಂಸ್ಥಾನವನ್ನು ಮುಸ್ಲಿಂ ದೊರೆಗಳಾದ ‘ಹೈದರಾಲಿ’ ಮತ್ತು ‘ಟಿಪ್ಪು’ ಆಳಿದ್ದರಿಂದ ಈ ರೀತಿಯ ಆರೋಪಗಳನ್ನು ಮಾಡುವುದು ಸಾಮಾನ್ಯವಾಗಿದೆ.

ಟಿಪ್ಪು ಸುಲ್ತಾನ್‌ ಶ್ರೀರಂಗಪಟ್ಟಣವನ್ನು ರಾಜಧಾನಿಯಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ. ಅಲ್ಲದೇ ಟಿಪ್ಪು ಕೋಮು ಸೌಹಾರ್ದತೆಗೂ ಹೆಸರಾಗಿದ್ದ ಎಂಬುದನ್ನು ಇತಿಹಾಸ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಆದರೆ ಆತ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಮುಸ್ಲಿಂ ವಿರುದ್ಧ ದ್ವೇಷವನ್ನು ಹರಡುವುದು ಎಗ್ಗಿಲ್ಲದೇ ಸಾಗಿದೆ. ಟಿಪ್ಪು ಹಿಂದೂ-ಮುಸ್ಲಿಂ ಭಾವೈಕ್ಯತೆ ಹೆಸರಾಗಿದ್ದ ಎಂಬುದಕ್ಕೆ ಆತ ಹಿಂದೂ ದೇವಾಲಯಗಳಿಗೆ ಕೊಟ್ಟ ಉಂಬಳಿಗಳು, ಹಿಂದೂಗಳನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿಕೊಂಡಿದ್ದು, ಶೃಂಗೇರಿ ಮಠದ ಸ್ವಾಮೀಜಿಯೊಂದಿಗೆ ಆತ ಹೊಂದಿದ್ದ ಪ್ರೀತಿ, ವಿಶ್ವಾಸಗಳೇ ಸಾಕ್ಷಿಯಾಗಿ ನಿಂತಿವೆ. ಆದರೆ ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಆತನ ಅಧಿಕಾರವಧಿಯಲ್ಲಿ ಹಿಂದೂಗಳನ್ನು ಅಪಮಾನಿಸಲಾಗಿದೆ ಎಂದು ಬಿಂಬಿಸುತ್ತಿರುವುದನ್ನು ಕಾಣಬಹುದು. ಕಾಳಿ ಸ್ವಾಮೀಜಿ ಆರೋಪ ಇದೇ ಹಿನ್ನೆಲೆಯಲ್ಲಿ ಮೂಡಿಬಂದಿರುವುದೆಂದು ಎಂಥವರೂ ಊಹಿಸುತ್ತಾರೆ. (ಟಿಪ್ಪು ಕುರಿತು ಹರಡಲಾಗಿರುವ ಸುಳ್ಳುಗಳಿಗೆ ಸಂಬಂಧಿಸಿದಂತೆ ಹಾಗೂ ನಿಜಸಂಗತಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ಕಾಳಿ ಸ್ವಾಮೀಜಿಯಷ್ಟೇ ಅಲ್ಲ, ಹೀಗೆ ಕೋಮುದ್ವೇಷವನ್ನು ಹರಡುವ ಯತ್ನಗಳು ಮೊದಲಿನಿಂದಲೂ ಸಾಗುತ್ತಲೇ ಇವೆ. ರಾಯಚೂರಿನಲ್ಲಿ ಮಸೀದಿ ಒಡೆದಾಗ ದೇವಾಲಯ ಪತ್ತೆಯಾಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಆರೋಪಿಸಲಾಗಿತ್ತು. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದರು. “ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಇಲ್ಲಿ ಪತ್ತೆಯಾಗಿರುವ ಕಂಬವನ್ನು ಹಿಂದೂ ದೇವಾಲಯ” ಎಂದು ಜಿಲ್ಲಾಧಿಕಾರಿ ಹೇಳಿದ್ದರು.

ಕಾಳಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಆದರೆ ಇದೇ ರೀತಿ ಈ ಹಿಂದೆಯೇ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಪ್ರಕರಣ ಏನಾಯಿತು ಎಂಬ ಪ್ರಶ್ನೆ ಏಳುತ್ತದೆ.

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಅವರು ಕಳೆದ ಅಕ್ಟೋಬರ್‌ನಲ್ಲಿ ನೀಡಿದ್ದರು.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದ ವಿಡಿಯೋ ವೈರಲ್‌ ಆಗಿತ್ತು.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸಿದ್ದರು.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದರು. ಬಾಬರ್‌‌ನನ್ನು ನಿಂದಿಸಿದ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದರು. ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

ಅಭಿವೃದ್ಧಿ ಅಜೆಂಡಾ ಇಲ್ಲದಿರುವಾಗ ಕೋಮು ಭಾವನೆಗಳೇ ಅಧಿಕಾರದ ಅಸ್ತ್ರಗಳಾಗಿ ಪರಿಣಮಿಸುತ್ತಿರುವ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಯತಿ ನರಸಿಂಗಾನಂದ ಕರೆ ನೀಡಿದ್ದನ್ನು ನೋಡಿದೆವು. ಕಾಳಿಚರಣ್‌ ಎಂಬ ಸ್ವಾಮೀಜಿ ಗಾಂಧೀಜಿಯ ಕುರಿತು ಅವಹೇಳನಕಾರಿಯಾಗಿ ಮತ್ತೊಂದೆಡೆ ಮಾತನಾಡಿದ್ದರು. ಇದನ್ನೆಲ್ಲ ಪ್ರಧಾನಿ ಮೋದಿಯವರು ನೋಡುತ್ತಾ ಕುಳಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ವಿರೋಧಿಸಿ ಒಂದು ಹೇಳಿಕೆಯನ್ನೂ ಪ್ರಧಾನಿಯವರು ನೀಡಿಲ್ಲ. ಐದು ರಾಜ್ಯಗಳ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಸ್ಲಿಂ ವಿರೋಧಿ ಹೇಳಿಕೆಗಳೇ ಚುನಾವಣೆಯ ಅಸ್ತ್ರಗಳಾಗಿ ಬಳಕೆಯಾಗುತ್ತಿರುವುದು ವಿಪರ್ಯಾಸ.


ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ’ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...