Homeಕರ್ನಾಟಕಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

- Advertisement -
- Advertisement -

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿಡಿಯೊ ವಿವಾದ ಸೃಷ್ಟಿಸಿದೆ. ಕೋಮು ಸೌಹಾರ್ದತೆ ಹಾನಿ ಮಾಡಲು ಯತ್ನಿಸಿದ ಸ್ವಾಮೀಜಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಕಾಳಿ ಸ್ವಾಮೀಜಿ ಮಸೀದಿ ಮುಂದೆ ನಿಂತು ಮಾತನಾಡುತ್ತಾ ಮಸೀದಿ ಕೆಡವಲು ಕರೆ ನೀಡಿದ್ದರು. ದೇವಾಲಯವನ್ನು ದ್ವಂಸ ಮಾಡಿ ಮಸೀದಿ ಮಾಡಿದ್ದಾರೆ. ಹೀಗಾಗಿ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕು ಎಂದು ವಿಡಿಯೊ ಮಾಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಅಷ್ಟೇ ಅಲ್ಲದೇ, “ನನ್ನ ಹೇಳಿಕೆಗೆ ಈಗಲೂ ನಾನು ಬದ್ದನಾಗಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರದಂತೆ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ‌ ಕಟ್ಟುತ್ತೇವೆ. ಮಸೀದಿ‌ ನನಗೆ ದೇವಾಲಯದ ರೀತಿ‌ ಕಾಣಿಸಿದೆ” ಎಂದು ಬಂಧನದ ಬಳಿಕ ಹೇಳಿಕೆ ನೀಡಿದ್ದರು.

ದೇವಾಲಯಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಲಾಗಿದೆ ಎಂದು ಸಂಘ ಪರಿವಾರದ ಮುಖಗಳು ಆರೋಪಿಸುವುದು ಇದೇ ಮೊದಲೇನೂ ಅಲ್ಲ. ಅಲ್ಲದೇ ಮೈಸೂರು ಸಂಸ್ಥಾನವನ್ನು ಮುಸ್ಲಿಂ ದೊರೆಗಳಾದ ‘ಹೈದರಾಲಿ’ ಮತ್ತು ‘ಟಿಪ್ಪು’ ಆಳಿದ್ದರಿಂದ ಈ ರೀತಿಯ ಆರೋಪಗಳನ್ನು ಮಾಡುವುದು ಸಾಮಾನ್ಯವಾಗಿದೆ.

ಟಿಪ್ಪು ಸುಲ್ತಾನ್‌ ಶ್ರೀರಂಗಪಟ್ಟಣವನ್ನು ರಾಜಧಾನಿಯಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ. ಅಲ್ಲದೇ ಟಿಪ್ಪು ಕೋಮು ಸೌಹಾರ್ದತೆಗೂ ಹೆಸರಾಗಿದ್ದ ಎಂಬುದನ್ನು ಇತಿಹಾಸ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಆದರೆ ಆತ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಮುಸ್ಲಿಂ ವಿರುದ್ಧ ದ್ವೇಷವನ್ನು ಹರಡುವುದು ಎಗ್ಗಿಲ್ಲದೇ ಸಾಗಿದೆ. ಟಿಪ್ಪು ಹಿಂದೂ-ಮುಸ್ಲಿಂ ಭಾವೈಕ್ಯತೆ ಹೆಸರಾಗಿದ್ದ ಎಂಬುದಕ್ಕೆ ಆತ ಹಿಂದೂ ದೇವಾಲಯಗಳಿಗೆ ಕೊಟ್ಟ ಉಂಬಳಿಗಳು, ಹಿಂದೂಗಳನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿಕೊಂಡಿದ್ದು, ಶೃಂಗೇರಿ ಮಠದ ಸ್ವಾಮೀಜಿಯೊಂದಿಗೆ ಆತ ಹೊಂದಿದ್ದ ಪ್ರೀತಿ, ವಿಶ್ವಾಸಗಳೇ ಸಾಕ್ಷಿಯಾಗಿ ನಿಂತಿವೆ. ಆದರೆ ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಆತನ ಅಧಿಕಾರವಧಿಯಲ್ಲಿ ಹಿಂದೂಗಳನ್ನು ಅಪಮಾನಿಸಲಾಗಿದೆ ಎಂದು ಬಿಂಬಿಸುತ್ತಿರುವುದನ್ನು ಕಾಣಬಹುದು. ಕಾಳಿ ಸ್ವಾಮೀಜಿ ಆರೋಪ ಇದೇ ಹಿನ್ನೆಲೆಯಲ್ಲಿ ಮೂಡಿಬಂದಿರುವುದೆಂದು ಎಂಥವರೂ ಊಹಿಸುತ್ತಾರೆ. (ಟಿಪ್ಪು ಕುರಿತು ಹರಡಲಾಗಿರುವ ಸುಳ್ಳುಗಳಿಗೆ ಸಂಬಂಧಿಸಿದಂತೆ ಹಾಗೂ ನಿಜಸಂಗತಿಗಾಗಿ ಇಲ್ಲಿ ಕ್ಲಿಕ್ ಮಾಡಿ).

ಕಾಳಿ ಸ್ವಾಮೀಜಿಯಷ್ಟೇ ಅಲ್ಲ, ಹೀಗೆ ಕೋಮುದ್ವೇಷವನ್ನು ಹರಡುವ ಯತ್ನಗಳು ಮೊದಲಿನಿಂದಲೂ ಸಾಗುತ್ತಲೇ ಇವೆ. ರಾಯಚೂರಿನಲ್ಲಿ ಮಸೀದಿ ಒಡೆದಾಗ ದೇವಾಲಯ ಪತ್ತೆಯಾಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಆರೋಪಿಸಲಾಗಿತ್ತು. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದರು. “ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಇಲ್ಲಿ ಪತ್ತೆಯಾಗಿರುವ ಕಂಬವನ್ನು ಹಿಂದೂ ದೇವಾಲಯ” ಎಂದು ಜಿಲ್ಲಾಧಿಕಾರಿ ಹೇಳಿದ್ದರು.

ಕಾಳಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಆದರೆ ಇದೇ ರೀತಿ ಈ ಹಿಂದೆಯೇ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಪ್ರಕರಣ ಏನಾಯಿತು ಎಂಬ ಪ್ರಶ್ನೆ ಏಳುತ್ತದೆ.

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಅವರು ಕಳೆದ ಅಕ್ಟೋಬರ್‌ನಲ್ಲಿ ನೀಡಿದ್ದರು.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದ ವಿಡಿಯೋ ವೈರಲ್‌ ಆಗಿತ್ತು.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸಿದ್ದರು.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದರು. ಬಾಬರ್‌‌ನನ್ನು ನಿಂದಿಸಿದ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದರು. ಕಾಳಿ ಸ್ವಾಮೀಜಿಯ ಪ್ರಕರಣ ಮುತಾಲಿಕ್‌ ಹೇಳಿಕೆಯ ಮುಂದುವರಿದ ಭಾಗವಾಗಿಯೇ ಇದೆ. ಮುಖಗಳು ಬೇರೆಯಾದರೂ ಧ್ವನಿ ಒಂದೇ.

ಅಭಿವೃದ್ಧಿ ಅಜೆಂಡಾ ಇಲ್ಲದಿರುವಾಗ ಕೋಮು ಭಾವನೆಗಳೇ ಅಧಿಕಾರದ ಅಸ್ತ್ರಗಳಾಗಿ ಪರಿಣಮಿಸುತ್ತಿರುವ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಯತಿ ನರಸಿಂಗಾನಂದ ಕರೆ ನೀಡಿದ್ದನ್ನು ನೋಡಿದೆವು. ಕಾಳಿಚರಣ್‌ ಎಂಬ ಸ್ವಾಮೀಜಿ ಗಾಂಧೀಜಿಯ ಕುರಿತು ಅವಹೇಳನಕಾರಿಯಾಗಿ ಮತ್ತೊಂದೆಡೆ ಮಾತನಾಡಿದ್ದರು. ಇದನ್ನೆಲ್ಲ ಪ್ರಧಾನಿ ಮೋದಿಯವರು ನೋಡುತ್ತಾ ಕುಳಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ವಿರೋಧಿಸಿ ಒಂದು ಹೇಳಿಕೆಯನ್ನೂ ಪ್ರಧಾನಿಯವರು ನೀಡಿಲ್ಲ. ಐದು ರಾಜ್ಯಗಳ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಸ್ಲಿಂ ವಿರೋಧಿ ಹೇಳಿಕೆಗಳೇ ಚುನಾವಣೆಯ ಅಸ್ತ್ರಗಳಾಗಿ ಬಳಕೆಯಾಗುತ್ತಿರುವುದು ವಿಪರ್ಯಾಸ.


ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ’ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...