Homeಮುಖಪುಟಮಸೀದಿ ಧ್ವಂಸ ಪ್ರಕರಣ | ಅಕ್ರಮವಾಗಿ ನಿರ್ಮಿಸಿರಲಿಲ್ಲ ಎಂದ ಎಸ್ಪಿ ನಿಯೋಗ

ಮಸೀದಿ ಧ್ವಂಸ ಪ್ರಕರಣ | ಅಕ್ರಮವಾಗಿ ನಿರ್ಮಿಸಿರಲಿಲ್ಲ ಎಂದ ಎಸ್ಪಿ ನಿಯೋಗ

- Advertisement -
- Advertisement -

ಉತ್ತರ ಪ್ರದೇಶದ ಕುಶಿನಗರದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಅಧಿಕಾರಿಗಳು ಮಸೀದಿಯ ಒಂದು ಭಾಗವನ್ನು ಕೆಡವಿದ ಎರಡು ದಿನಗಳ ನಂತರ, ಸಮಾಜವಾದಿ ಪಕ್ಷದ (ಎಸ್ಪಿ) 18 ಸದಸ್ಯರ ನಿಯೋಗ ಮಂಗಳವಾರ (ಫೆ.11) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಉತ್ತರ ಪ್ರದೇಶ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಲಾಲ್ ಬಿಹಾರಿ ಯಾದವ್ ಅವರು ನಿಯೋಗದ ನೇತೃತ್ವ ವಹಿಸಿದ್ದರು. ನಿಯೋಗವು ತನ್ನ ವರದಿಯನ್ನು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಸಲ್ಲಿಸಲಿದೆ.

ಹೈಕೋರ್ಟ್‌ ತಡೆಯಾಜ್ಞೆ ತೆರವಾದ ಮರುದಿನವೇ ಕುಶಿನಗರ ಜಿಲ್ಲಾಡಳಿತ ಹಟಾ ಪ್ರದೇಶದ ಮದ್ನಿ ಮಸೀದಿಯ ಒಂದು ಭಾಗವನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ನೆಲಸಮಗೊಳಿಸಿದೆ.

ಮಸೀದಿಯ ವಿರುದ್ಧ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ನಿಯೋಗ, ತನ್ನ ವರದಿಯನ್ನು ಸಿದ್ಧಪಡಿಸಿದೆ. ನಿಯೋಗದಲ್ಲಿ ಮಾಜಿ ಸಚಿವ ಬ್ರಹ್ಮಶಂಕರ್ ತ್ರಿಪಾಠಿ, ರಾಧೇಶ್ಯಾಮ್ ಸಿಂಗ್ ಮತ್ತು ಮಾಜಿ ಸಂಸದ ಬಾಲೇಶ್ವರ್ ಯಾದವ್ ಅವರಂತಹ ಹಿರಿಯ ಎಸ್ಪಿ ನಾಯಕರು ಇದ್ದರು.

ಕಳೆದ ಭಾನುವಾರ (ಫೆ.9) ಭಾರೀ ಭದ್ರತೆಯಲ್ಲಿ ಮಸೀದಿಯ ಧ್ವಂಸ ಕಾರ್ಯಾಚರಣೆ ನಡೆದಿದೆ. ಕೆಡವಲಾದ ಕಟ್ಟಡವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಸೀದಿ ಸಮಿತಿ ಅಧಿಕಾರಿಗಳ ಕ್ರಮ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳ ಉಲ್ಲಂಘನೆ ಎಂದು ಆರೋಪಿಸಿದೆ.

“ನ್ಯಾಯಾಲಯದ ತಡೆಯಾಜ್ಞೆಯ ಹೊರತಾಗಿಯೂ ಧ್ವಂಸ ಮಾಡಲಾಗಿದೆ. ಯಾವುದೇ ಮುನ್ಸೂಚನೆ ನೀಡದೆ ಫೆ. 9ರಂದು ಮಸೀದಿ ಕಟ್ಟಡದ ಒಂದು ಭಾಗವನ್ನು ಕೆಡವಿದ್ದಾರೆ” ಎಂದು ಮಸೀದಿ ಸಮಿತಿ ಹೇಳಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಮಸೀದಿಯ ಪುನರ್‌ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಎಸ್ಪಿ ನಿಯೋಗದ ಮುಖ್ಯಸ್ಥ ಲಾಲ್ ಬಿಹಾರಿ ಯಾದವ್ ಅವರು ಮಸೀದಿಯನ್ನು ಕಾನೂನುಬದ್ಧವಾಗಿ ನೋಂದಾಯಿತ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಅಧಿಕಾರಿಗಳ ಆರೋಪವನ್ನು ತಳ್ಳಿ ಹಾಕಿದ ಅವರು, ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಿಲ್ಲ. ಅಧಿಕಾರಿಗಳು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...