Homeಮುಖಪುಟಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ - ಸಿಪಿಐ(ಎಂ)

ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

- Advertisement -
- Advertisement -

ಶತಮಾನಗಳಷ್ಟು ಹಳೆಯದಾದ ಮಸೀದಿಗಳನ್ನು ದೇವಾಲಯ ಎಂದು ಪ್ರತಿಪಾದಿಸುವ ಮೂಲಕ ಕೆಳ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲಾಗುತ್ತಿರುವ ಮತ್ತು ಅದನ್ನು ಪರಿಗಣಿಸುತ್ತಿರುವ ಬಗ್ಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಪಾಲಿಟ್ ಬ್ಯೂರೋ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಅನ್ನು ಎತ್ತಿಹಿಡಿಯುವ ಮೂಲಕ ಅಂತಹ ದಾವೆಗಳನ್ನು ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರುವುದು ದುರದೃಷ್ಟಕರ ಎಂದು ಪಕ್ಷವೂ ಹೇಳಿದೆ. ಮಸೀದಿಗಳ ವಿರುದ್ಧ

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಪಕ್ಷದ ಪಾಲಿಟ್ ಬ್ಯೂರೊ, 2019ರ ಬಾಬರಿ ಮಸೀದಿ ಒಡೆದ ವಿವಾದದ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991 ರ ಸಿಂಧುತ್ವವನ್ನು ಮತ್ತು ಅದರ ಜಾರಿಯನ್ನು ಸ್ಪಷ್ಟವಾಗಿ ಎತ್ತಿಹಿಡಿದಿದೆ. ಈ ನಿರ್ದೇಶನದ ಪ್ರಕಾರ, ಕಾಯಿದೆಯನ್ನು ಉಲ್ಲಂಘಿಸುವ ಕಾನೂನು ಪ್ರಕ್ರಿಯೆಗಳಿಗೆ ತಡೆ ಹಾಕಲು ಮಧ್ಯಪ್ರವೇಶಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರಣಾಸಿ ಮತ್ತು ಮಥುರಾ ನಂತರ, ಸಂಭಾಲ್‌ನಲ್ಲಿ, ಕೆಳ ನ್ಯಾಯಾಲಯವು 16 ನೇ ಶತಮಾನದ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತು. ಅದು ಹಿಂಸಾಚಾರಕ್ಕೆ ಕಾರಣವಾಗಿದ್ದು, ನಾಲ್ವರು ಮುಸ್ಲಿಂ ಯುವಕರನ್ನು ಕೊಲ್ಲಲಾಯಿತು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಅಜ್ಮೀರ್ ಷರೀಫ್ ದರ್ಗಾಕ್ಕೆ ಸಂಬಂಧಿಸಿದಂತೆ ಅಜ್ಮೀರ್‌ನ ಸಿವಿಲ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನು ಪಕ್ಷವು ಉಲ್ಲೇಖಿಸಿದೆ.

ಇಷ್ಟೆ ಅಲ್ಲದೆ, ನೆರೆಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು, ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪಕ್ಷವು ಪುನರುಚ್ಚರಿಸಿದೆ. ಈ ನಿಟ್ಟಿನಲ್ಲಿ ಅಲ್ಲಿನ ಆಡಳಿತವು ಇಸ್ಲಾಮಿ ಮೂಲಭೂತವಾದಿ ಶಕ್ತಿಗಳ ಚಟುವಟಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಸಿಪಿಎಂ ಹೇಳಿದೆ. ಮಸೀದಿಗಳ ವಿರುದ್ಧ

ಅದೇ ಸಮಯದಲ್ಲಿ, ಭಾರತದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಮತ್ತು ಹಿಂದುತ್ವ ಸಂಘಟನೆಗಳ ಪ್ರಯತ್ನಗಳನ್ನು ಪೊಲಿಟ್ ಬ್ಯೂರೋ ಖಂಡಿಸಿದ್ದು, “ಬಾಂಗ್ಲಾದೇಶದ ವಿಚಾರವನ್ನು ಎತ್ತಿಕೊಂಡು ಪ್ರಚೋದಿಸಲು ಅವರು ಪ್ರಯತ್ನಿಸುತ್ತಿದ್ದು, ಅಂತಹ ವಿಧಾನವು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ಸಹಾಯವಾಗುವುದಿಲ್ಲ” ಎಂದು ಪಕ್ಷವು ಹೇಳಿದೆ.

ಎರಡೂ ದೇಶಗಳಲ್ಲಿನ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಉಭಯ ದೇಶಗಳ ಜನರ ಹಿತಾಸಕ್ತಿಗಳಿಗೆ ಹಾನಿ ಮಾಡುವ ಎಲ್ಲಾ ರೀತಿಯ ಕೋಮುವಾದದ ವಿರುದ್ಧ ತೀವ್ರವಾಗಿ ಹೋರಾಟ ಮಾಡುವಂತೆ ಸಿಪಿಐಎಂ ಕರೆ ನೀಡಿದೆ.

ಅಷ್ಟೆ ಅಲ್ಲದೆ, ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇರಳಕ್ಕೆ ಸರಿಯಾದ ನೆರವನ್ನು ನಿರಾಕರಿಸುವಲ್ಲಿ ಸರ್ಕಾರದ ನಿರ್ದಯ ಉದಾಸೀನತೆಯನ್ನು ಅದು ಕಟುವಾಗಿ ಟೀಕಿಸಿದೆ. “ತಕ್ಷಣದ ಪರಿಹಾರಕ್ಕಾಗಿ 214.68 ಕೋಟಿ ರೂ. ಮತ್ತು ಸಮಗ್ರ ಚೇತರಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ 2,319.1 ಕೋಟಿ ರೂ.ಗಾಗಿ ಕೇರಳ ತುರ್ತು ಮನವಿ ಮಾಡಿದ್ದರೂ, ಕೇಂದ್ರವು ನಾಲ್ಕು ತಿಂಗಳು ಕಳೆದರೂ ಅನುದಾನವನ್ನು ಅನುಮೋದಿಸಲು ವಿಫಲವಾಗಿದೆ” ಎಂದು ಪಕ್ಷವೂ ಹೇಳಿದೆ.

“ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ವರ್ಗೀಕರಿಸಲು ನಿರಾಕರಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಲವನ್ನು ಮನ್ನಾ ಮಾಡಲು ಇಷ್ಟವಿಲ್ಲದಿರುವುದು ಸಹ ತೀವ್ರವಾದ ಅನ್ಯಾಯವನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಇದು ಅಮಾನವೀಯ ವಿಧಾನವಾಗಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಫೆಡರಲ್ ಬೆಂಬಲದ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಸಿಪಿಎಂ ಹೇಳಿದೆ. ರಾಜ್ಯ ಸರ್ಕಾರ ಹೇಳಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಲಿಟ್ ಬ್ಯೂರೋ ಕೇಂದ್ರಕ್ಕೆ ಮನವಿ ಮಾಡಿದೆ.

ಪಕ್ಷದ ಹೇಳಿಕೆಯಲ್ಲಿ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರೈತರ ಮೇಲಿನ ಪೊಲೀಸರ ದಬ್ಬಾಳಿಕೆಯನ್ನು ಖಂಡಿಸಿದೆ. ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಮತ್ತು ಇತರ ಸಂಘಟನೆಗಳ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿದೆ ಎಂದು ಪಕ್ಷ ತಿಳಿಸಿದೆ. ಬಂಧಿತ ರೈತರು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹಲವು ಕಾರ್ಯಕರ್ತರ ಗೃಹಬಂಧನ ನಡೆಯುತ್ತಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಮಹಿಳೆಯರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಆಘಾತಕಾರಿಯಾಗಿದೆ ಎಂದು ಪಕ್ಷವೂ ಹೇಳಿದೆ.

“…ಈ ಹೋರಾಟಕ್ಕೆ ಸಿಪಿಐ(ಎಂ) ಸಂಪೂರ್ಣ ಬೆಂಬಲ ನೀಡುತ್ತದೆ. ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಮತ್ತು ಸರಕಾರವು ನ್ಯಾಯಯುತ ಬೇಡಿಕೆಗಳನ್ನು ಒಪ್ಪಿಕೊಂಡು ಅವುಗಳನ್ನು ಜಾರಿಗೊಳಿಸಬೇಕು ಎಂದು” ಎಂದು ಪಕ್ಷ ಹೇಳಿದೆ. ನವದೆಹಲಿಯಲ್ಲಿ ನಡೆದ ಪಾಲಿಟ್‌ ಬ್ಯೂರೋ ಸಭೆಯ ನಂತರ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...